ಬ್ರೇಕಿಂಗ್ ನ್ಯೂಸ್
01-07-26 09:18 pm HK News Desk ಕರಾವಳಿ
ಮಂಗಳೂರು, ಜುಲೈ 1 ಪ್ರಕೃತಿ ವಿಕೋಪ ಯಾವಾಗ ಹೇಗೆ ಆಗುತ್ತೆ ಗೊತ್ತಿಲ್ಲ. ರಾತ್ರೋರಾತ್ರಿ ಘಟನೆಯಾದಾಗ ಊರವರು ಪೊಲೀಸ್ ಅಧಿಕಾರಿಗಳು ರಕ್ಷಣೆ ಕಾರ್ಯ ಮಾಡುತ್ತಾರೆ. ಆದರೆ ಇಂತಹ ಡೇಂಜರ್ ಪ್ರದೇಶಗಳಿದ್ದರೆ ಮೊದಲೇ ಜಿಲ್ಲಾಡಳಿತಕ್ಕೆ ತಿಳಿಸಿದರೆ ಕ್ರಮ ಜರುಗಿಸಲಾಗುವುದು. ಇದಕ್ಕಾಗಿ ಜನರೇ ಜಾಗೃತರಾಗಬೇಕಾಗಿದೆ ಎಂದು ನಾಗುರಿಯಲ್ಲಿ ಮನೆ ಕುಸಿತ ದುರಂತದ ಬಗ್ಗೆ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಕಂಕನಾಡಿ ನಾಗುರಿಯಲ್ಲಿ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಘಟನೆಯಲ್ಲಿ ಗಾಯಗೊಂಡವರಿಗೆ ಜಿಲ್ಲಾಡಳಿತ ವತಿಯಿಂದ ವೈದ್ಯಕೀಯ ಚಿಕಿತ್ಸೆ ನೀಡುತ್ತೇವೆ. ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
ಮಳೆ ಈಗಷ್ಟೇ ಪ್ರಾರಂಭವಾಗಿದ್ದು ಮಾತ್ರ. ಅಷ್ಟರಲ್ಲೇ ದೊಡ್ಡ ದುರಂತ ಸಂಭವಿಸಿದೆ. ಇದು ನಮ್ಮೆಲ್ಲರಿಗೂ ಎಚ್ಚರಿಕೆಯ ಕರೆ ಗಂಟೆ. ಅದರಲ್ಲೂ ಮಂಗಳೂರು ಎತ್ತರ ತಗ್ಗು ಪ್ರದೇಶವಾಗಿದ್ದು ಈ ವಿಚಾರದಲ್ಲಿ ಜನರೇ ಸ್ವಯಂ ಜಾಗೃತರಾಗಬೇಕು. ಅಧಿಕಾರಿಗಳು ಆದಷ್ಟು ಅಪಾಯಕಾರಿ ಪ್ರದೇಶಕ್ಕೆ ಭೇಟಿ ನೀಡಿ ಜನರಿಗೆ ಎಚ್ಚರಿಕೆಗಳನ್ನು ನೀಡುತ್ತಾರೆ. ಆದರೆ ಇಂತಹ ಅಪಾಯಗಳ ಬಗ್ಗೆ ಜನರು ಸ್ವಯಂಪ್ರೇರಿತರಾಗಿಯೇ ಜಾಗರೂಕರಾಗಬೇಕು.





ಸರಕಾರಿ ಜಾಗದಲ್ಲಿ ಅಪಾಯಕಾರಿ ಸ್ಥಿತಿ ಇದ್ರೆ ಜನರು ಗಮನಕ್ಕೆ ತರಬೇಕು, ಅದನ್ನು ಸರಿ ಮಾಡಿಕೊಡುತ್ತೇವೆ. ಆದರೆ ಖಾಸಗಿ ಜಾಗದಲ್ಲಿ ಈ ರೀತಿ ಕಾಂಪೌಂಡ್ ಕುಸಿದಾಗ ನಮಗೇನು ಮಾಡೋದಕ್ಕೆ ಆಗಲ್ಲ. ಮನೆ ದುರಸ್ತಿ ನಿಟ್ಟಿನಲ್ಲಿ ಇಲ್ಲಿ ಮನೆ ಮಾಲೀಕರಿದ್ದಾರೆ. ಹಾಗಾಗಿ ನೇರ ಸಂತ್ರಸ್ತರಿಗೆ ಪರಿಹಾರ ನೀಡುವ ವಿಷಯ ಬರೋದಿಲ್ಲ. ಮನೆ ಮಾಲೀಕರಿಗೆ ದುರಸ್ತಿ ಮಾಡಲು ಬೇಕಿದ್ದರೆ ಪರಿಹಾರ ಕೊಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಸಚಿವ ಖಾದರ್ ಉತ್ತರಿಸಿದರು.
ಮಂಗಳೂರಿನ ಈ ಘಟನೆ ಇಡೀ ಕರಾವಳಿಗೆ ಸಂದೇಶವಾಗಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಡೇಂಜರ್ ಇದೆ ಅಂದ್ರೆ ದೂರ ನಿಂತು ಸರಕಾರಕ್ಕೆ ತಿಳಿಸಬೇಕು. ಏನೇ ವ್ಯವಸ್ಥೆ ಇದ್ರೂ ಪ್ರಕೃತಿ ವಿಕೋಪ ಆದಾಗ ಏನೂ ಮಾಡೋಕೆ ಆಗಲ್ಲ. ಏನೂ ಆಗಬಾರದು ಅನ್ನೋದೇ ನಮ್ಮ ಪ್ರಾರ್ಥನೆ ಎಂದು ಹೇಳಿದ ಖಾದರ್, ತೊಕ್ಕೊಟ್ಟು ತಡೆಗೋಡೆ ಕುಸಿದ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಖಾಸಗಿಯವರು ಕಟ್ಟಿದ ಕಟ್ಟಡದಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಅದಕ್ಕೆ ಅವರೇ ಹೊಣೆ ಆಗುತ್ತಾರೆ. ಈ ಬಗ್ಗೆ ಕ್ರಮ ಜರುಗಿಸಲು ಕಂದಾಯ ಸಚಿವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm