ಬ್ರೇಕಿಂಗ್ ನ್ಯೂಸ್
15-07-26 10:59 am HK News Staffer ಕರಾವಳಿ
ಮುಂಬೈ, ಜುಲೈ 15 : ಬಾಲಿವುಡ್ ನಟ ಆಮಿರ್ ಖಾನ್ ಇತ್ತೀಚೆಗೆ ತನ್ನ 61ನೇ ವಯಸ್ಸಿನಲ್ಲಿ ಹಿಂದೂ ಮಹಿಳೆ ಗೌರಿ ಸ್ಪ್ರಾಟ್ ಜೊತೆಗೆ ಮೂರನೇ ಮದುವೆಯಾಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಮುಸ್ಲಿಂ ದಾರುಲ್ ಇಫ್ತಾದ ಮುಖ್ಯಸ್ಥ ಮುಫ್ತಿ ಮೌಲಾನಾ ಇಬ್ರಾಹಿಂ ಹುಸೇನ್ ಅವರು, ಆಮೀರ್ ಖಾನ್ ವಿರುದ್ಧ ಫತ್ವಾ ಹೊರಡಿಸಿದ್ದಾರೆ.
ಇಸ್ಲಾಮಿಕ್ ಬೋಧನೆಗಳ ಪ್ರಕಾರ, ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗಲು ಅನುಮತಿ ಇಲ್ಲ. ಷರಿಯಾ ಕಾನೂನಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ. ಆಮಿರ್ ಖಾನ್ ಮತ್ತು ಉದ್ಯಮಿ ಗೌರಿ ಸ್ಪ್ರಾಟ್ ಅವರು ವಿಶೇಷ ವಿವಾಹ ಕಾಯ್ದೆಯಡಿ ಮುಂಬೈನ ಮನೆಯಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಜುಲೈ 5 ರಂದು ದಂಪತಿಯಾಗಿದ್ದರು. ಈ ಹಿನ್ನೆಲೆಯಲ್ಲಿ, ಮುಸ್ಲಿಮೇತರರನ್ನು ಮದುವೆಯಾಗುವುದು ಶರಿಯಾಕ್ಕೆ ವಿರುದ್ಧವಾಗಿದೆ. ಹಾಗೆ ಮಾಡುವವರು ಅಲ್ಲಾಹನ ಮುಂದೆ ಪಶ್ಚಾತ್ತಾಪ ಪಡಬೇಕು ಎಂದು ಹುಸೇನ್ ಹೇಳಿದ್ದಾರೆ.
ಕುರಾನ್ನ ಬೋಧನೆಗಳ ಹಿನ್ನೆಲೆಯಲ್ಲಿ ಫತ್ವಾ-ಎ-ಆಮ್ (fatwa-e-aam) ಹೊರಡಿಸಿರುವುದಾಗಿ ಮುಫ್ತಿ ಹೇಳಿದ್ದಾರೆ. ಸಾರ್ವಜನಿಕ ಫತ್ವಾವನ್ನು ಹೊರಡಿಸಿದ್ದೇನೆ. ಕುರಾನ್ನಲ್ಲಿ ಹೇಳಿರುವಂತೆ ಅಲ್ಲಾಹನ ಆದೇಶವನ್ನು ವಿವರಿಸಿದ್ದೇನೆ. ನಂಬಿಕೆಯುಳ್ಳ ಮುಸ್ಲಿಂ ಪುರುಷರಿಗೆ, ಮುಸ್ಲಿಂ ಮಹಿಳೆಯರು ಮತ್ತು ನಂಬಿಕೆಯುಳ್ಳ ಮಹಿಳೆಯರೊಂದಿಗೆ ಮಾತ್ರ ವಿವಾಹವಾಗಲು ಅನುಮತಿಸಲ್ಪಡುತ್ತದೆ. ಒಂದು ಮುಸ್ಲಿಂ ಪುರುಷ ಬೇರೆ ಧರ್ಮದವರನ್ನು ವಿವಾಹವಾದರೆ, ಆಕೆ ಆ ಧರ್ಮವನ್ನು ಸ್ವೀಕರಿಸುವವರೆಗೂ ಅದಕ್ಕೆ ಅನುಮತಿ ನೀಡುವುದಿಲ್ಲ, ಮುಸ್ಲಿಮೇತರ ವ್ಯಕ್ತಿಯನ್ನು ಮದುವೆಯಾಗುವುದು "ಪಾಪ" ಎಂದು ಅವರು ಹೇಳಿದ್ದಾರೆ.
"ಇದು ಕಾನೂನುಬಾಹಿರ (ಹರಾಮ್) ಕೃತ್ಯ, ಮತ್ತು ಹಾಗೆ ಮಾಡುವ ವ್ಯಕ್ತಿಯು ಪಾಪ ಮಾಡಿದಂತೆ. ಅಂತಹ ವ್ಯಕ್ತಿಯು ಅಲ್ಲಾಹನ ಮುಂದೆ ಪಶ್ಚಾತ್ತಾಪ ಪಡಬೇಕು. ಈ ಪಾಪದಿಂದ ದೂರ ಸರಿಯಬೇಕು. ಈ ಬಹಿರಂಗ ಫತ್ವಾವನ್ನು ಹೊರಡಿಸಿ ಈ ಅಭಿಪ್ರಾಯವನ್ನು ಮಂಡಿಸಿದ್ದೇನೆ. ಇಂದು ಪ್ರಪಂಚದಾದ್ಯಂತ, ಇಸ್ಲಾಮಿಕ್ ಶರಿಯಾದ ಚಿತ್ರಣವು ಮುಸ್ಲಿಮರು ಮತ್ತು ಅವರ ಕ್ರಿಯೆಗಳೊಂದಿಗೆ ಸಂಬಂಧ ಹೊಂದಿರುವುದರಿಂದ ಇದನ್ನು ಸ್ಪಷ್ಟಪಡಿಸುವುದು ಅಗತ್ಯವಾಗಿತ್ತು ಎಂದಿದ್ದಾರೆ.
ಮುಸ್ಲಿಮೇತರ ಮುಖಂಡರು ಕೂಡಾ ಮುಸ್ಲಿಮರು ಏನು ಮಾಡ್ತಾರೆ ಎಂಬುದನ್ನು ನೋಡ್ತಾರೆ. ಅಲ್ಲಾಹನ ಆದೇಶದಂತೆ ನಡೆಯುತ್ತಾರೆ ಅಂದುಕೊಳ್ಳುತ್ತಾರೆ. ಹಾಗಾಗೀ ಯಾರೇ ಆದ್ರೂ ತಪ್ಪು ಕೃತ್ಯ ಮಾಡಿದಾಗ, ಅದು ತಪ್ಪು ಸಂದೇಶವಾಗುತ್ತದೆ. ಇಸ್ಲಾಂ ಮತ್ತು ಶರಿಯಾದ ಗುರಿ ಒಂದೇ ಆಗಿದೆ. ಮುಸ್ಲಿಮರು ತಮ್ಮ ಧಾರ್ಮಿಕ ಬೋಧನೆಗಳನ್ನು ಗೌರವಿಸಬೇಕು ಮತ್ತು ತಪ್ಪು ತಿಳುವಳಿಕೆಗಳನ್ನು ಉಂಟುಮಾಡುವ ಮತ್ತು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಕ್ರಿಯೆಗಳನ್ನು ತಪ್ಪಿಸಬೇಕು ಎಂದು ಅವರು ಮನವಿ ಮಾಡಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm