ಬ್ರೇಕಿಂಗ್ ನ್ಯೂಸ್
15-07-26 05:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಪೊಲೀಸರು ಕೇವಲ ನಾಮಕಾವಸ್ತೆಗೆ ಬಾಂಗ್ಲಾದೇಶಿಗರನ್ನ ಹಿಡಿಯೋದಲ್ಲ. ಮಂಗಳೂರಿನಲ್ಲಿ ಯಾವ ಮಾಲ್ ನಲ್ಲಿ ಎಷ್ಟೆಷ್ಟು ಬಾಂಗ್ಲಾದೇಶಿ ಇದ್ದಾರೆ ಅನ್ನೋ ಲೆಕ್ಕ ಕೊಡುತ್ತೇವೆ. ನೀವು ನಮಗೆ ಫ್ರೀ ಹ್ಯಾಂಡ್ ಕೊಡಿ, ನಾವೇ ಹಿಡಿದುಕೊಡುತ್ತೇವೆ. ನೀವು ಕಾರ್ಯಾಚರಣೆ ಮಾಡದಿದ್ದಲ್ಲಿ ಬೆಂಗಳೂರು ರೀತಿ ನಾವು ಕಾರ್ಯಾಚರಣೆ ಮಾಡುತ್ತೇವೆ ಎಂದು ಹಿಂದು ಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹೇಳಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಪುನೀತ್ ಕೆರೆಹಳ್ಳಿ, ಮಂಗಳೂರಿನಲ್ಲಿ 19 ಮಂದಿ ಬಾಂಗ್ಲಾದೇಶಿಗಳ ಪತ್ತೆ ಹಿನ್ನೆಲೆ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಅಕ್ರಮ ಬಾಂಗ್ಲಾದೇಶಿಗಳಿಗೆ ಕರ್ನಾಟಕ ಯಾಕೆ ಸುರಕ್ಷಿತವಾಗಿದೆ. ಇಲ್ಲಿನ ರಾಜಕೀಯ ನಾಯಕರ ಕೃಪೆಯಿಂದಲೇ ಅಕ್ರಮ ವಲಸಿಗರು ಹೆಚ್ಚುತ್ತಿದ್ದಾರೆ. ಮಂಗಳೂರಿನಲ್ಲಿ ಒಂದೇ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಾಂಗ್ಲಾನ್ನರು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಪೊಲೀಸರು ಕೇವಲ ನಾಮಕಾವಸ್ತೆಗೆ ಬಾಂಗ್ಲಾದೇಶಿಗರನ್ನ ಹಿಡಿಯುವಂತೆ ಆಗಬಾರದು. ಪೊಲೀಸ್ ಕಮಿಷನರ್ ನಮ್ಮ ಜೊತೆ ಕೈಜೋಡಿಸಿದರೆ ನಾವೇ ಹಿಡಿದು ಕೊಡುತ್ತೇವೆ. ಯಾವ ಯಾವ ಮುಸ್ಲಿಂ ಮುಖಂಡರು ಅವರಿಗೆ ಸಾಥ್ ಕೊಡುತ್ತಾರೆ ಅನ್ನೋ ಮಾಹಿತಿ ನಾವು ನೀಡುತ್ತೇವೆ ಎಂದು ಹೇಳಿದರು.
ಇಷ್ಟೊಂದು ಸಂಖ್ಯೆಯಲ್ಲಿ ಬಾಂಗ್ಲಾದೇಶ ನಿವಾಸಿಗಳು ಬರ್ತಿರೋವಾಗ ನಿಮ್ಮ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ರೈಲಿನಲ್ಲಿ ಬಂದಿಳಿಯುವವರನ್ನ ವಿಚಾರಣೆ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ ಅವರು, ದೇಶದ ಆಂತರಿಕ ಭದ್ರತೆಗೆ ಬಹುದೊಡ್ಡ ಹೊಡೆತ ಕೊಟ್ಟ ವಿಚಾರ ಇದು. ನಾವು ಇದರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಾಂಗ್ಲಾದೇಶಿಯರಿಗೆ ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಸಿಗುತ್ತಿದೆ. ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದು ಕರ್ನಾಟಕದಲ್ಲಿ ಪಾಸ್ ಪೋರ್ಟ್ ಮಾಡಿಸಿಕೊಳ್ಳುತ್ತಾನೆ. ಕರ್ನಾಟಕದ ಮಹಾನಗರಗಳಲ್ಲೇ ಲಕ್ಷ ಲಕ್ಷ ಬಾಂಗ್ಲಾದೇಶಿಯರಿದ್ದಾರೆ. ದಾಖಲೆಗಳ ಸಮೇತ ನಾವು ಕಾರ್ಯಾಚರಣೆ ಮಾಡಿದ್ದೇವೆ.
ಉತ್ತರ ಭಾರತದಲ್ಲಿ ತೊಂದರೆಯಾದ್ರೆ ಈ ಬಾಂಗ್ಕಾದೇಶಿಯರಿಗೆ ಕರ್ನಾಟಕ ಯಾಕೆ ಸುರಕ್ಷಿತವಾಗಿದೆ. ಇವರಿಗೆ ಕರ್ನಾಟಕ ಯಾಕೆ ರಕ್ಷಣೆ ಕೊಡುತ್ತಿದೆ? ಕೆಲವು ಮುಸಲ್ಮಾನ್ ಮುಖಂಡರು ಕೆಲಸಕ್ಕೆಂದು ಕರೆ ತಂದು ರಕ್ಷಣೆ ಕೊಡುತ್ತಿದ್ದಾರೆ. ಗೃಹ ಇಲಾಖೆ, ಆಂತರಿಕ ಭದ್ರತಾ ವಿಭಾಗ ಸಂಪೂರ್ಣ ವಿಫಲವಾಗಿದೆ. ಗೃಹ ಮಂತ್ರಿಯಾದವರು ತಮ್ಮ ಕೆಲಸ ಮಾಡೋದು ಬಿಟ್ಟು ಗುಪ್ತಚರ ಇಲಾಖೆಯನ್ನ RSS, ಹಿಂದು ಕಾರ್ಯಕರ್ತರ ಹಿಂದೆ ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm