ಬ್ರೇಕಿಂಗ್ ನ್ಯೂಸ್
15-07-26 09:03 pm HK News Staffer ಕರಾವಳಿ
ಮಂಗಳೂರು, ಜುಲೈ 15: ಬಾಂಗ್ಲಾದೇಶಿ ನಿವಾಸಿಗಳು ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ಕೊಟ್ಟು ತನಿಖೆ ಮಾಡಿಸಲು ಸ್ವತಂತ್ರರಿದ್ದಾರೆ. ಹಾಗಂತ, ತಾವಾಗಿಯೇ ತನಿಖೆ ಮಾಡಲು ಹೋದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಎಚ್ಚರಿಸಿದ್ದಾರೆ.
ಬಾಂಗ್ಲಾನ್ನರ ಪತ್ತೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಪೊಲೀಸ್ ಕಮಿಷನರ್, ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಪರಿಶೀಲನೆ ಕೈಗೊಳ್ಳಲು ಪೊಲೀಸರಿಗೆ ಮಾತ್ರ ಅಧಿಕಾರ ಇದೆ. ಅವರನ್ನು ವಶಕ್ಕೆ ಪಡೆದು ಗಡೀಪಾರು ಮಾಡುವ ಅಧಿಕಾರವನ್ನೂ ಪೊಲೀಸ್ ಇಲಾಖೆ ಹೊಂದಿದೆ. ಆದರೆ ಬಾಂಗ್ಲಾದೇಶಿ ನಿವಾಸಿಗಳು ಅನ್ನುವ ಗುಮಾನಿಯಲ್ಲಿ ಯಾರಾದ್ರೂ ಪೊಲೀಸರ ಕೆಲಸ ಮಾಡಲು ಹೋದರೆ ಕಾನೂನು ಕ್ರಮಕ್ಕೆ ಸಿಲುಕಬೇಕಾಗುತ್ತದೆ. ಆ ರೀತಿ ಮಾಡುವುದು ಕಲಂ 341 ಮತ್ತು 506 ಪ್ರಕಾರ ಅಪರಾಧವಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಇದೇ ರೀತಿ ಕೆಲವರು ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ವಿಚಾರಣೆ ಮಾಡಲು ಹೋಗಿ ಜೈಲು ಸೇರುವ ಸ್ಥಿತಿಯಾಗಿತ್ತು ಎಂದು ಉಲ್ಲೇಖಿಸಿರುವ ಕಮಿಷನರ್, ಯಾರನ್ನೇ ಆಗಲಿ ಗುರುತಿನ ಕಾರ್ಡ್ ತೋರಿಸುವಂತೆ ಪೀಡಿಸುವುದು ಆತನ ಖಾಸಗಿತನದ ಹಕ್ಕಿನ ಉಲ್ಲಂಘನೆ ಆಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ನಾವು ದಾಳಿ ಮಾಡುತ್ತೇವೆಂದು ಹೇಳಿಕೊಂಡು ಯಾರಾದ್ರೂ ಕಾನೂನು ಕೈಗೆತ್ತಿಕೊಂಡರೆ ಬಂಧಿಸಿ ಕ್ರಮ ಜರುಗಿಸಲಾಗುವುದು. ವಲಸಿಗರು ಅನ್ನುವ ನೆಪದಲ್ಲಿ ಪರಿಶೀಲಿಸುವ ಅಧಿಕಾರ ಇದೆಯೇ, ಇಲ್ಲವೇ ಎಂಬುದನ್ನು ಆನಂತರ ಕೋರ್ಟಿನಲ್ಲಿ ತೋರಿಸಿಕೊಳ್ಳಬೇಕಷ್ಟೇ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಹಿಂದು ಸಂಘಟನೆ ಪರ ಮುಖಂಡ ಪುನೀತ್ ಕೆರೆಹಳ್ಳಿ ಎಂಬವರು ಮಂಗಳೂರಿನಲ್ಲಿ ಬಾಂಗ್ಲಾನ್ನರ ಮೇಲೆ ದಾಳಿ ಮಾಡುತ್ತೇವೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಯಾರದ್ದೇ ಹೆಸರೆತ್ತದೆ ವಾರ್ನಿಂಗ್ ಮಾಡಿದ್ದಾರೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm