ಬ್ರೇಕಿಂಗ್ ನ್ಯೂಸ್
15-07-26 09:03 pm HK News Staffer ಕರಾವಳಿ
ಮಂಗಳೂರು, ಜುಲೈ 15: ಬಾಂಗ್ಲಾದೇಶಿ ನಿವಾಸಿಗಳು ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ಕೊಟ್ಟು ತನಿಖೆ ಮಾಡಿಸಲು ಸ್ವತಂತ್ರರಿದ್ದಾರೆ. ಹಾಗಂತ, ತಾವಾಗಿಯೇ ತನಿಖೆ ಮಾಡಲು ಹೋದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಎಚ್ಚರಿಸಿದ್ದಾರೆ.
ಬಾಂಗ್ಲಾನ್ನರ ಪತ್ತೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಪೊಲೀಸ್ ಕಮಿಷನರ್, ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಪರಿಶೀಲನೆ ಕೈಗೊಳ್ಳಲು ಪೊಲೀಸರಿಗೆ ಮಾತ್ರ ಅಧಿಕಾರ ಇದೆ. ಅವರನ್ನು ವಶಕ್ಕೆ ಪಡೆದು ಗಡೀಪಾರು ಮಾಡುವ ಅಧಿಕಾರವನ್ನೂ ಪೊಲೀಸ್ ಇಲಾಖೆ ಹೊಂದಿದೆ. ಆದರೆ ಬಾಂಗ್ಲಾದೇಶಿ ನಿವಾಸಿಗಳು ಅನ್ನುವ ಗುಮಾನಿಯಲ್ಲಿ ಯಾರಾದ್ರೂ ಪೊಲೀಸರ ಕೆಲಸ ಮಾಡಲು ಹೋದರೆ ಕಾನೂನು ಕ್ರಮಕ್ಕೆ ಸಿಲುಕಬೇಕಾಗುತ್ತದೆ. ಆ ರೀತಿ ಮಾಡುವುದು ಕಲಂ 341 ಮತ್ತು 506 ಪ್ರಕಾರ ಅಪರಾಧವಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಇದೇ ರೀತಿ ಕೆಲವರು ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ವಿಚಾರಣೆ ಮಾಡಲು ಹೋಗಿ ಜೈಲು ಸೇರುವ ಸ್ಥಿತಿಯಾಗಿತ್ತು ಎಂದು ಉಲ್ಲೇಖಿಸಿರುವ ಕಮಿಷನರ್, ಯಾರನ್ನೇ ಆಗಲಿ ಗುರುತಿನ ಕಾರ್ಡ್ ತೋರಿಸುವಂತೆ ಪೀಡಿಸುವುದು ಆತನ ಖಾಸಗಿತನದ ಹಕ್ಕಿನ ಉಲ್ಲಂಘನೆ ಆಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ನಾವು ದಾಳಿ ಮಾಡುತ್ತೇವೆಂದು ಹೇಳಿಕೊಂಡು ಯಾರಾದ್ರೂ ಕಾನೂನು ಕೈಗೆತ್ತಿಕೊಂಡರೆ ಬಂಧಿಸಿ ಕ್ರಮ ಜರುಗಿಸಲಾಗುವುದು. ವಲಸಿಗರು ಅನ್ನುವ ನೆಪದಲ್ಲಿ ಪರಿಶೀಲಿಸುವ ಅಧಿಕಾರ ಇದೆಯೇ, ಇಲ್ಲವೇ ಎಂಬುದನ್ನು ಆನಂತರ ಕೋರ್ಟಿನಲ್ಲಿ ತೋರಿಸಿಕೊಳ್ಳಬೇಕಷ್ಟೇ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಹಿಂದು ಸಂಘಟನೆ ಪರ ಮುಖಂಡ ಪುನೀತ್ ಕೆರೆಹಳ್ಳಿ ಎಂಬವರು ಮಂಗಳೂರಿನಲ್ಲಿ ಬಾಂಗ್ಲಾನ್ನರ ಮೇಲೆ ದಾಳಿ ಮಾಡುತ್ತೇವೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಯಾರದ್ದೇ ಹೆಸರೆತ್ತದೆ ವಾರ್ನಿಂಗ್ ಮಾಡಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm