ಬ್ರೇಕಿಂಗ್ ನ್ಯೂಸ್
07-01-21 05:13 pm Mangalore Correspondent ಕರಾವಳಿ
ಮಂಗಳೂರು, ಜ.7 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲಾಗುವುದು. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ಸರಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ಮಾಡುವುದರ ಬಗ್ಗೆ ಈಗಾಗ್ಲೇ ತನಿಖೆಗೆ ಸೂಚನೆ ನೀಡಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಂಗಳೂರಿನ ಮುಡಿಪು ಭಾಗದಿಂದ ತಮಿಳುನಾಡು, ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ಕೆಂಪು ಮುರ ಮಣ್ಣು ಸಾಗಾಟದ ವಿರುದ್ಧ ಸಂಪೂರ್ಣ ಕಡಿವಾಣ ಹಾಕಲಾಗುವುದು. ಈ ದಂಧೆಯ ಬಗ್ಗೆ ಈಗಾಗ್ಲೇ ತನಿಖೆಗೆ ಆದೇಶ ಮಾಡಿದ್ದು ಅಕ್ರಮ ದಂಧೆ ಎಸಗಿದವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.


ಅಂತರಾಜ್ಯ ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ ಕೈ ಗೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟವನ್ನು ಪತ್ತೆ ಮಾಡಲು 196 ಸಿ.ಸಿ. ಕ್ಯಾಮರಾ ಅಳವಡಿಸಲಾಗುವುದು. ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ಸಹಯೋಗದಲ್ಲಿ ಸಿಸಿಟಿವಿ ಅಳವಡಿಕೆ ಆಗಲಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್, ದ.ಕ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಲಕ್ಷ್ಮೀ ಪ್ರಸಾದ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ವಿಷ್ಣುವರ್ಧನ್, ಶಾಸಕ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil has assured of Sand Mining to start within 15 days in Mangalore.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm