ಬ್ರೇಕಿಂಗ್ ನ್ಯೂಸ್
07-01-21 05:13 pm Mangalore Correspondent ಕರಾವಳಿ
ಮಂಗಳೂರು, ಜ.7 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲಾಗುವುದು. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ಮಾಡುವುದರ ಬಗ್ಗೆ ಈಗಾಗ್ಲೇ ತನಿಖೆಗೆ ಸೂಚನೆ ನೀಡಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಂಗಳೂರಿನ ಮುಡಿಪು ಭಾಗದಿಂದ ತಮಿಳುನಾಡು, ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ಕೆಂಪು ಮುರ ಮಣ್ಣು ಸಾಗಾಟದ ವಿರುದ್ಧ ಸಂಪೂರ್ಣ ಕಡಿವಾಣ ಹಾಕಲಾಗುವುದು. ಈ ದಂಧೆಯ ಬಗ್ಗೆ ಈಗಾಗ್ಲೇ ತನಿಖೆಗೆ ಆದೇಶ ಮಾಡಿದ್ದು ಅಕ್ರಮ ದಂಧೆ ಎಸಗಿದವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಅಂತರಾಜ್ಯ ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ ಕೈ ಗೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟವನ್ನು ಪತ್ತೆ ಮಾಡಲು 196 ಸಿ.ಸಿ. ಕ್ಯಾಮರಾ ಅಳವಡಿಸಲಾಗುವುದು. ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ಸಹಯೋಗದಲ್ಲಿ ಸಿಸಿಟಿವಿ ಅಳವಡಿಕೆ ಆಗಲಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್, ದ.ಕ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಲಕ್ಷ್ಮೀ ಪ್ರಸಾದ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ವಿಷ್ಣುವರ್ಧನ್, ಶಾಸಕ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil has assured of Sand Mining to start within 15 days in Mangalore.
01-09-25 06:59 pm
Bangalore Correspondent
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm