ಬ್ರೇಕಿಂಗ್ ನ್ಯೂಸ್
17-07-26 07:22 pm HK News Staffer ಕರಾವಳಿ
ಉಳ್ಳಾಲ, ಜು.17: ಉಳ್ಳಾಲ ಸಮುದ್ರ ತೀರಕ್ಕೆ ರಾಶಿ ರಾಶಿ ಬೂತಾಯಿ ಮೀನುಗಳು ಬಂದು ಅಪ್ಪಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಉಳ್ಳಾಲ ಸಮುದ್ರ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿವೆ. ಸುಮಾರು ಅರ್ಧ ತಾಸಿನ ವರೆಗೂ ಮೀನುಗಳು ತೀರಕ್ಕೆ ಅಪ್ಪಳಿಸಿದ್ದು ಸ್ಥಳೀಯರು ಹಾಗೂ ಬೀಚಲ್ಲಿ ಪಹರೆ ಕಾಯುತ್ತಿದ್ದ ಗೃಹ ರಕ್ಷಕ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೀನುಗಳನ್ನ ಪ್ಲಾಸ್ಟಿಕ್ ಲಕೋಟೆ, ಗೋಣಿ ಚೀಲಗಳಲ್ಲಿ ತುಂಬಿಸಿದ್ದಾರೆ. ಇನ್ನು ಕೆಲವರು ತೀರದಲ್ಲಿ ಸಿಕ್ಕ ಬೂತಾಯಿ ಮೀನುಗಳನ್ನ ಸಂಗ್ರಹಿಸಿ ಮಾರಾಟ ನಡೆಸಿ ಸಾವಿರಾರು ರೂಪಾಯಿಗಳನ್ನ ಸಂಪಾದಿಸಿದ್ದಾರೆ.

ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಜೇಶ್ವರದ ಯಾಂತ್ರೀಕೃತ ನಾಡ ದೋಣಿಗಳು ವೇಗದಲ್ಲಿ ಹಾದು ಹೋದ ಪರಿಣಾಮ ಮೋಟಾರು ಯಂತ್ರದ ಸದ್ದಿಗೆ ಬೂತಾಯಿ ಮೀನುಗಳ ಹಿಂಡು ಏಕಾಏಕಿ ದಡಕ್ಕೆ ಅಪ್ಪಳಿಸಿರಬಹುದು ಎಂದು ಸ್ಥಳೀಯ ಮೀನುಗಾರರೊಬ್ಬರು ಹೇಳಿದ್ದಾರೆ.
ಆದರೆ ಮಳೆಗಾಲದಲ್ಲಿ ಈ ರೀತಿ ಬೂತಾಯಿ ಮೀನುಗಳ ರಾಶಿ ಬಂದು ಬೀಳುತ್ತಿರುವುದು ಹಿಂದೆಯೂ ನಡೆದಿತ್ತು. ಪಣಂಬೂರು, ಮಲ್ಪೆಯಲ್ಲಿ ಮೀನುಗಳು ರಾಶಿ ರಾಶಿಯಾಗಿ ಬಂದು ದಡಕ್ಕೆ ಅಪ್ಪಳಿಸಿದ್ದವು. ಮೀನುಗಳು ಹಿಂಡಾಗಿ ಹೋಗುವ ಸಂದರ್ಭದಲ್ಲಿ ತೀರದತ್ತ ಬಂದರೆ ಅಬ್ಬರದ ಅಲೆಗಳಿಗೆ ಸಿಲುಕಿ ಮೇಲಕ್ಕೆ ಎಸೆಯಲ್ಪಡುತ್ತವೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm