ಬ್ರೇಕಿಂಗ್ ನ್ಯೂಸ್
17-07-26 07:58 pm HK News Staffer ಕರಾವಳಿ
ಮಂಗಳೂರು, ಜುಲೈ 17: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಆದರೆ ಕಾಂಗ್ರೆಸ್ ಸರ್ಕಾರ ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ(ಪಿಆರ್ ಸಿ) ಜಾರಿಗೆ ತರುತ್ತಿರುವುದು ಬಾಂಗ್ಲಾ ನಿವಾಸಿಗಳಿಗೆ ವರದಾನವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಬಾಂಗ್ಲಾದೇಶಿ ನಿವಾಸಿಗಳ ಪತ್ತೆ ಕಾರ್ಯ ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿರುವ ಕಾಮತ್, ಆದರೆ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವಾಗ ಕಾಂಗ್ರೆಸ್ ಸರ್ಕಾರ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್ಸಿ) ಜಾರಿಗೆ ತರುತ್ತಿರುವುದು ಅಕ್ರಮ ವಲಸಿಗರಿಗೆ ವರದಾನವಾಗಲಿದೆ. ಆಮೂಲಕ ಅಧಿಕೃತವಾಗಿ ಮತದಾರರ ಪಟ್ಟಿಗೆ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯನ್ನೂ ಅಡವಿಡುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿರುವುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಭವಿಷ್ಯದಲ್ಲಿ ಅವರಿಂದಾಗಿ ಏನೇ ಅನಾಹುತ ನಡೆದರೂ ಅದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಕೂಡಲೇ ಎಷ್ಟು ಅಕ್ರಮ ವಲಸಿಗರು ಪಿ.ಆರ್.ಸಿ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಲಿ. ಗೃಹ ಸಚಿವರಂತೂ ಆರ್.ಎಸ್.ಎಸ್ ನಂತಹ ದೇಶಭಕ್ತ ಸಂಘಟನೆ ನೋಂದಣಿ ಮಾಡಿಕೊಂಡಿಲ್ಲ, ಅದರ ಪಥಸಂಚಲನಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಮನಸ್ಥಿತಿಯಲ್ಲೇ ಮುಳುಗಿರುವುದು ನಾಡಿನ ದೌರ್ಭಾಗ್ಯ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಇದರ ಗಂಭೀರತೆಯ ಅರಿವಿದ್ದರೆ ಈ ಕೂಡಲೇ ರಾಜ್ಯಾದ್ಯಂತ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ ಹೊರದಬ್ಬುವ ತಾಕತ್ತು ಪ್ರದರ್ಶಿಸಲಿ. ಮಂಗಳೂರಿನಲ್ಲಿ ಅಕ್ರಮ ವಲಸಿಗರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಾಧ್ಯತೆಯಿದ್ದು, ಇದು ನಮ್ಮ ಜಿಲ್ಲೆಯ ಭದ್ರತೆಗೆ ಸವಾಲಾಗಿದೆ. ಹಾಗಾಗಿ ನಗರದೆಲ್ಲೆಡೆ ಇರುವ ಬಿಲ್ಡರ್ಗಳು, ಕಟ್ಟಡ ನಿರ್ಮಾಣ ಗುತ್ತಿಗೆದಾರರು, ಹೋಟೆಲ್ ಗಳು, ಸಲೂನ್, ಶಾಪಿಂಗ್ ಮಾಲ್ ಸಹಿತ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಉದ್ಯೋಗ ನೀಡುವ ವೇಳೆ ಹೆಚ್ಚಿನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಹಾಗೂ ಅನುಮಾನಾಸ್ಪದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಗೆ ದೂರು ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm