ಬ್ರೇಕಿಂಗ್ ನ್ಯೂಸ್
24-07-26 10:37 pm HK News Desk ಕರಾವಳಿ
ಮಂಗಳೂರು, ಜುಲೈ 24: ನೀಟ್ ಪರೀಕ್ಷೆ ಅಕ್ರಮ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಧಾರಣೆ ಆಗ್ರಹಿಸಿ ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ನಮ್ಮ ಭವಿಷ್ಯ ಮಾರಾಟಕ್ಕಿಲ್ಲ, ನ್ಯಾಯ ಬೇಕು ನ್ಯಾಯ, ನೀಟ್ ಹಗರಣ ನಮ್ಮ ಕನಸುಗಳನ್ನು ಕೊಂದಿದೆ ಎನ್ನುವ ರೀತಿಯ ಭಿತ್ತಿಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ನಗರದ ಹ0ಪನಕಟ್ಟೆಯಿಂದ ಟೌನ್ ಹಾಲ್ ವರೆಗೆ ಮೆರವಣಿಗೆ ನಡೆಸಿದರು. ಬಳಿಕ ಟೌನ್ ಹಾಲ್ ಮುಂದೆ ಸೇರಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಎಲ್ಲರು ತಮ್ಮ ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದಿದ್ದು ಬಿಟ್ಟರೆ ಬೇರಾವುದೇ ಪಕ್ಷದ ಧ್ವಜ, ಪ್ಲೇಕಾರ್ಡ್ ಗಳನ್ನು ಹಿಡಿಯಲಿಲ್ಲ.



ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಪ್ರತಿಭಟನೆ ನಡೆದಿದ್ದು, ನೀಟ್ ಅಕ್ರಮ ಆರೋಪ ಹೊತ್ತಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು, ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಆದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹ ಮಾಡಿದರು. ಪ್ರತಿಭಟನೆಯಲ್ಲಿ ಹಿಂದು, ಮುಸ್ಲಿಂ, ಕ್ರಿಸ್ತಿಯನ್ ವಿದ್ಯಾರ್ಥಿಗಳು ಸೇರಿದ್ದು ನಾವೆಲ್ಲ ಒಂದು ಎನ್ನುವ ಸಂದೇಶ ನೀಡಿದರು. ಅಲ್ಲದೆ, ಯಾವುದೇ ರಾಜಕೀಯ ನಾಯಕರು ಭಾಗವಹಿಸದೆ ಕೇವಲ ವಿದ್ಯಾರ್ಥಿಗಳೇ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಂಜೆಯಾಗುತ್ತಿದ್ದಂತೆ ಕೆಲವು ವಿದ್ಯಾರ್ಥಿಗಳು ಕ್ಯಾಂಡಲ್ ಉರಿಸಿ ಸಾವಿಗೆ ಶರಣಾದ ವಿದ್ಯಾರ್ಥಿಗಳ ಪರವಾಗಿ ಗೌರವ ಸಲ್ಲಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am