ಬ್ರೇಕಿಂಗ್ ನ್ಯೂಸ್
25-07-26 02:42 pm HK News Staffer ಕರಾವಳಿ
ಮಂಗಳೂರು, ಜುಲೈ 25 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಬೇರೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹವಾಮಾನ ಇಲಾಖೆಯು ವಾಸ್ತವಿಕ ಸ್ಥಿತಿಯನ್ನು ಅರಿಯದೆ ನೀಡುತ್ತಿರುವ ಅವೈಜ್ಞಾನಿಕ ವರದಿಗಳಿಂದ ಶೈಕ್ಷಣಿಕ ವಲಯಕ್ಕೆ ತೊಂದರೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಮಳೆಯೇ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸತತವಾಗಿ ರಜೆಗಳನ್ನು ಘೋಷಿಸುತ್ತಿರುವುದು ಮತ್ತು ವಸತಿ ಶಾಲೆಗಳಿಗೂ ಅನ್ವಯವಾಗುವಂತೆ ರಜೆ ನೀಡುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಮುಂಜಾಗ್ರತಾ ನಿರ್ಧಾರವನ್ನು ಒಟ್ಟಾರೆಯಾಗಿ ಸ್ವಾಗತಿಸಿದರೂ ಸಹ, ಮಳೆಯಿಲ್ಲದೆ ಬಿಸಿಲು ಅಥವಾ ಸಾಮಾನ್ಯ ವಾತಾವರಣವಿರುವ ಸಂದರ್ಭದಲ್ಲಿ ಅನಗತ್ಯವಾಗಿ ರಜೆ ನೀಡುವುದರಿಂದ ವಿದ್ಯಾರ್ಥಿಗಳ ಪಠ್ಯಕ್ರಮ ಮತ್ತು ಶೈಕ್ಷಣಿಕ ಪ್ರಗತಿಗೆ ಭಾರೀ ನಷ್ಟವಾಗುತ್ತದೆ ಎಂದು ಅವರು ತನ್ನ ಹೇಳಿಕೆಯಲ್ಲಿ ಆಕ್ಷೇಪಿಸಿದ್ದಾರೆ.
ಹವಾಮಾನ ಇಲಾಖೆಯು ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸದೆ ಅವೈಜ್ಞಾನಿಕವಾದ ವರದಿಗಳನ್ನು ನೀಡುತ್ತಿದ್ದು, ಮಳೆಯೇ ಇಲ್ಲದಿದ್ದರೂ ರಜೆ ಘೋಷಿಸುವಂತಾಗಿದೆ. ಇದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ದೊಡ್ಡ ಮಟ್ಟದಲ್ಲಿ ಅಡ್ಡಿಯುಂಟುಮಾಡುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸರಕಾರ ಮತ್ತು ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳು ಸರಿಯಿರಬಹುದು, ಆದರೆ ಎಲ್ಲೆಡೆ ಮಳೆ ಇಲ್ಲದಿರುವಾಗ ವಸತಿ ಶಾಲೆಗಳಿಗೂ ರಜೆ ನೀಡುವುದು ಎಷ್ಟು ಸರಿ? ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳಲ್ಲಿ ವಿಭಿನ್ನವಾದ ಹವಾಮಾನ ಪರಿಸ್ಥಿತಿ ಇರುತ್ತದೆ. ಒಂದು ತಾಲೂಕಿನಲ್ಲಿ ಮಳೆಯಿದ್ದರೆ, ಮತ್ತೊಂದು ತಾಲೂಕಿನಲ್ಲಿ ಬಿಸಿಲು ಇರಬಹುದು. ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಕೇವಲ ಒಟ್ಟಾರೆ ಮುನ್ಸೂಚನೆಯನ್ನು ಆಧರಿಸದೆ, ಆಯಾ ತಾಲೂಕುಗಳ ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನು ಗಮನಿಸಿ, ವಲಯವಾರು ನಿರ್ಧಾರಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಸರಕಾರಿ ಇಲಾಖೆಗಳು ಗಮನಹರಿಸಿ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳಕಳಿಯ ವ್ಯಕ್ತಪಡಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am