ಬ್ರೇಕಿಂಗ್ ನ್ಯೂಸ್
30-07-26 07:51 pm HK News Staffer ಕರಾವಳಿ
ಮಂಗಳೂರು, ಜು.30: ಪತಿಯ ಸತತ ಕಿರುಕುಳದಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ದೂರದ ರಾಜಸ್ಥಾನದಿಂದ ಮಂಗಳೂರಿಗೆ ಬಂದು ದಿಕ್ಕು ಕಾಣದೆ ಅಲೆದಾಡುತ್ತಿದ್ದ ವೇಳೆ, ಪಾಂಡೇಶ್ವರ ಪೊಲೀಸರು ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಯ ಸಮಯೋಚಿತ ನೆರವಿನಿಂದ ಸುರಕ್ಷಿತವಾಗಿ ಕುಟುಂಬದ ಮಡಿಲು ಸೇರಿದ್ದಾರೆ.
ರಾಜಸ್ಥಾನದ ಗೋಪಿ ಎಂಬ ಮಹಿಳೆ ಪತಿಯಿಂದ ಅನುಭವಿಸುತ್ತಿದ್ದ ಕಿರುಕುಳದಿಂದ ತೀವ್ರವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಜರ್ಜರಿತರಾದ ಅವರು ಮನೆ ತೊರೆದು ಜೂನ್ 26ರಂದು ಮಂಗಳೂರಿಗೆ ಬಂದಿಳಿದಿದ್ದರು. ನಗರದಲ್ಲಿ ಪರಿಚಯವಿಲ್ಲದ ಸ್ಥಳದಲ್ಲಿ ದಿಕ್ಕು ತೋಚದೆ ಒಂಟಿಯಾಗಿ ಅಲೆದಾಡುತ್ತಿದ್ದರು.
ಸಂಕಷ್ಟದಲ್ಲಿದ್ದ ಮಹಿಳೆಯನ್ನು ಗುರುತಿಸಿದ ಪೊಲೀಸರು;
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ನಗರದ ಪ್ರದೇಶದಲ್ಲಿ ಅನುಮಾನಾಸ್ಪದ ಹಾಗೂ ಸಂಕಷ್ಟದ ಸ್ಥಿತಿಯಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆಕೆಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಳಿಕ ಮಹಿಳೆಯ ಸುರಕ್ಷತೆ ಹಾಗೂ ಆರೈಕೆಯ ದೃಷ್ಟಿಯಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ (ಎನ್ಜಿಒ) ಉಳಿಯಲು ವ್ಯವಸ್ಥೆ ಮಾಡಲಾಗಿತ್ತು.


ಕೌನ್ಸೆಲಿಂಗ್ ಮೂಲಕ ಮಾಹಿತಿ ಸಂಗ್ರಹ;
ಎನ್ಜಿಒ ಸಂಸ್ಥೆಯ ಪದಾಧಿಕಾರಿಗಳು ಮಹಿಳೆಗೆ ಅಗತ್ಯ ಆರೈಕೆ ಹಾಗೂ ಮಾನಸಿಕ ಧೈರ್ಯ ತುಂಬುವ ಕೌನ್ಸೆಲಿಂಗ್ ನೀಡಿದ್ದಾರೆ. ಈ ವೇಳೆ ಮಹಿಳೆಯಿಂದ ಆಕೆಯ ಹಿನ್ನೆಲೆ ಹಾಗೂ ಕುಟುಂಬದ ವಿವರಗಳನ್ನು ಪಡೆದುಕೊಂಡಿದ್ದಾರೆ. ನಂತರ ರಾಜಸ್ಥಾನದಲ್ಲಿದ್ದ ಆಕೆಯ ತಂದೆಯನ್ನು ಸಂಪರ್ಕಿಸಿ ಮಗಳು ಮಂಗಳೂರಿನಲ್ಲಿ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ತಂದೆ-ಮಗಳ ಭಾವುಕ ಭೇಟಿ;
ಮಾಹಿತಿ ತಿಳಿಯುತ್ತಿದ್ದಂತೆ ರಾಜಸ್ಥಾನದಿಂದ ಮಂಗಳೂರಿಗೆ ಆಗಮಿಸಿದ ತಂದೆಗೆ ಎನ್ಜಿಒ ಸಿಬ್ಬಂದಿ ಮಹಿಳೆಯನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ. ದೀರ್ಘ ಸಮಯದ ಬಳಿಕ ಸಂಕಷ್ಟದಲ್ಲಿದ್ದ ಮಗಳನ್ನು ಕಂಡ ತಂದೆ ಹಾಗೂ ತಂದೆಯನ್ನು ಅಪ್ಪಿಕೊಂಡ ಮಗಳ ಭಾವುಕ ಕ್ಷಣಕ್ಕೆ ಮಂಗಳೂರಿನ ಎನ್ಜಿಒ ಸಂಸ್ಥೆ ಸಾಕ್ಷಿಯಾಯಿತು.
ಕೌಟುಂಬಿಕ ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕುವವರು ಆತುರದ ನಿರ್ಧಾರ ಕೈಗೊಳ್ಳದೆ, ಪೊಲೀಸ್ ಇಲಾಖೆ, ಮಹಿಳಾ ಸಹಾಯವಾಣಿ ಹಾಗೂ ವಿಶ್ವಾಸಾರ್ಹ ಸಂಸ್ಥೆಗಳ ನೆರವು ಪಡೆಯಬೇಕು. ಸಂಕಷ್ಟದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸೂಕ್ತ ನೆರವು ನೀಡುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
19-08-26 08:40 pm
HK News Staffer
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
20-08-26 01:58 pm
HK News Staffer
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm