ಬ್ರೇಕಿಂಗ್ ನ್ಯೂಸ್
31-07-26 10:58 pm HK News Staffer ಕರಾವಳಿ
Photo credits : news kannada
ಬೆಂಗಳೂರು, ಜುಲೈ 31: ಕಣ ಕಣದಲ್ಲೂ ಸಮಾಜಘಾತುಕತನವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡು ಪೋಸ್ಟ್ ಮಾಡಿರುವ ಸಚಿವರು, ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದಿದ್ದಾರೆ.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ" ಪರಂಪರೆಯ ರಾಯಭಾರಿಯಾಗಿ ಮಾತನಾಡಿದ್ದಾರೆ! ಸಿ.ಟಿ ರವಿ, ಯಶಪಾಲ್ ಸುವರ್ಣ ಬಿಜೆಪಿ ಸಂಸ್ಕೃತಿಯ ರಾಯಭಾರಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವಾಗಲೇ ಭರತ್ ಶೆಟ್ಟಿಯವರೂ ನಾನೇನೂ ಕಮ್ಮಿ ಇಲ್ಲ ಎಂದು ಅಖಾಡಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶಾಸಕ, ಸಂಸದರಂತಹ ಎಷ್ಟೇ ಪ್ರಭಾವಿ ಸ್ಥಾನದಲ್ಲಿದ್ದರೂ ಕಾನೂನು ಪಾಲನೆಯ ಕರ್ತವ್ಯ ಮಾಡಿದ ಪೊಲೀಸರನ್ನು ಜನತೆ ಶ್ಲಾಘಿಸುತ್ತಿದ್ದಾರೆ, ನಿಂದನೆಗೆ ಇಳಿದಿರುವ ಬಿಜೆಪಿಗರಿಗೆ ತಿಳಿದಿರಲಿ, ಪೊಲೀಸರು ಖಾಕಿ ಹಾಕಿಕೊಂಡು ಕಾನೂನು ಪಾಲನೆ ಮಾಡುತ್ತಿದ್ದಾರೆಯೇ ಹೊರತು ಬಿಜೆಪಿಗರಂತೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಗರು ತಾವು ಸಂವಿಧಾನ, ಕಾನೂನು, ನಿಯಮಗಳಿಗೆ ಅತೀತರು ಎಂದು ಭಾವಿಸಿಕೊಂಡಿದ್ದಾರೆ, ಈ ಭ್ರಮೆಯಿಂದ ಹೊರ ಬಂದು ಸಭ್ಯರಾಗದೇ ಇದ್ದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ, ಇದಕ್ಕೆ ಯಾರೂ ಹೊರತಲ್ಲ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಬಿಜೆಪಿ ನಾಯಕರಾಗಲಿ, ಕಾರ್ಯಕರ್ತರೇ ಆಗಿರಲಿ, ಕಾನೂನು ಕ್ರಮ ಜರುಗಿಸಬಾರದು ಎಂದರೆ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಮಾತು ಮತ್ತು ಕೃತಿಗಳನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಕರ್ನಾಟಕದ ಪೊಲೀಸರನ್ನು ನಾಯಿಗೆ ಹೋಲಿಸುವ ಮಾತುಗಳು ಅವರ ದುರಹಂಕಾರದ ಪರಮಾವಧಿಯನ್ನು ಸೂಚಿಸುತ್ತದೆ. ನಮ್ಮ ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಯಾವುದೇ ಪ್ರಯತ್ನಗಳನ್ನೂ ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಾಜಘಾತುಕತನವನ್ನು ಕಣಕಣದಲ್ಲೂ ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 30, 2026
ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ"… pic.twitter.com/ErOwd3vT2x
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm