ಬ್ರೇಕಿಂಗ್ ನ್ಯೂಸ್
31-07-26 10:58 pm HK News Staffer ಕರಾವಳಿ
Photo credits : news kannada
ಬೆಂಗಳೂರು, ಜುಲೈ 31: ಕಣ ಕಣದಲ್ಲೂ ಸಮಾಜಘಾತುಕತನವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡು ಪೋಸ್ಟ್ ಮಾಡಿರುವ ಸಚಿವರು, ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದಿದ್ದಾರೆ.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ" ಪರಂಪರೆಯ ರಾಯಭಾರಿಯಾಗಿ ಮಾತನಾಡಿದ್ದಾರೆ! ಸಿ.ಟಿ ರವಿ, ಯಶಪಾಲ್ ಸುವರ್ಣ ಬಿಜೆಪಿ ಸಂಸ್ಕೃತಿಯ ರಾಯಭಾರಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವಾಗಲೇ ಭರತ್ ಶೆಟ್ಟಿಯವರೂ ನಾನೇನೂ ಕಮ್ಮಿ ಇಲ್ಲ ಎಂದು ಅಖಾಡಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶಾಸಕ, ಸಂಸದರಂತಹ ಎಷ್ಟೇ ಪ್ರಭಾವಿ ಸ್ಥಾನದಲ್ಲಿದ್ದರೂ ಕಾನೂನು ಪಾಲನೆಯ ಕರ್ತವ್ಯ ಮಾಡಿದ ಪೊಲೀಸರನ್ನು ಜನತೆ ಶ್ಲಾಘಿಸುತ್ತಿದ್ದಾರೆ, ನಿಂದನೆಗೆ ಇಳಿದಿರುವ ಬಿಜೆಪಿಗರಿಗೆ ತಿಳಿದಿರಲಿ, ಪೊಲೀಸರು ಖಾಕಿ ಹಾಕಿಕೊಂಡು ಕಾನೂನು ಪಾಲನೆ ಮಾಡುತ್ತಿದ್ದಾರೆಯೇ ಹೊರತು ಬಿಜೆಪಿಗರಂತೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಗರು ತಾವು ಸಂವಿಧಾನ, ಕಾನೂನು, ನಿಯಮಗಳಿಗೆ ಅತೀತರು ಎಂದು ಭಾವಿಸಿಕೊಂಡಿದ್ದಾರೆ, ಈ ಭ್ರಮೆಯಿಂದ ಹೊರ ಬಂದು ಸಭ್ಯರಾಗದೇ ಇದ್ದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ, ಇದಕ್ಕೆ ಯಾರೂ ಹೊರತಲ್ಲ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಬಿಜೆಪಿ ನಾಯಕರಾಗಲಿ, ಕಾರ್ಯಕರ್ತರೇ ಆಗಿರಲಿ, ಕಾನೂನು ಕ್ರಮ ಜರುಗಿಸಬಾರದು ಎಂದರೆ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಮಾತು ಮತ್ತು ಕೃತಿಗಳನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಕರ್ನಾಟಕದ ಪೊಲೀಸರನ್ನು ನಾಯಿಗೆ ಹೋಲಿಸುವ ಮಾತುಗಳು ಅವರ ದುರಹಂಕಾರದ ಪರಮಾವಧಿಯನ್ನು ಸೂಚಿಸುತ್ತದೆ. ನಮ್ಮ ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಯಾವುದೇ ಪ್ರಯತ್ನಗಳನ್ನೂ ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಾಜಘಾತುಕತನವನ್ನು ಕಣಕಣದಲ್ಲೂ ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 30, 2026
ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ"… pic.twitter.com/ErOwd3vT2x
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm