ಬ್ರೇಕಿಂಗ್ ನ್ಯೂಸ್
05-08-26 08:08 pm HK News Staffer ಕರಾವಳಿ
ಮಂಗಳೂರು, ಆ.5: ಸುರತ್ಕಲ್ ಬಳಿಯ ಪ್ರತಿಷ್ಠಿತ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ಸ್ವಯಂಪ್ರೇರಿತವಾಗಿ ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ 290 ಗ್ರಾಂ ಗಾಂಜಾ ಪತ್ತೆಯಾಗಿದ್ದು ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಸಿದ ಡ್ರಗ್ಸ್ ಜಾಗೃತಿ ಅಭಿಯಾನದ ನಂತರ, ಕಾಲೇಜು ಆಡಳಿತ ಮಂಡಳಿಗಳು ತನ್ನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಿಗಿಗೊಳಿಸಿತ್ತು. ಆಂತರಿಕ ಕಮಿಟಿ ಸದಸ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಮೂವರು ವಿದ್ಯಾರ್ಥಿಗಳ ಬಳಿ ಗಾಂಜಾ ಇರುವುದು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ ಸುರತ್ಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದೆ.
ಗಾಂಜಾ ಪೊಟ್ಟಣಗಳಿದ್ದ ಮೂವರು ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೂವರೂ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(b) (ಮಾದಕದ್ರವ್ಯ ಸೇವನೆ) ಹಾಗೂ 8(c) ಸೇರಿದಂತೆ ವಿವಿಧ ಕಲಂ ಅಡಿಯಲ್ಲಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಗೂ ಗಾಂಜಾದ ಪ್ರಮಾಣ ಕಡಿಮೆ ಇರುವುದನ್ನು ಪರಿಗಣಿಸಿ, ನ್ಯಾಯಾಲಯವು ಶ್ಯೂರಿಟಿ ಪಡೆದು ಜಾಮೀನು ನೀಡಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಡ್ರಗ್ ಪೆಡ್ಲರ್ನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಡ್ರಗ್ಸ್ ವಿರೋಧಿ ಅಭಿಯಾನದ ನಂತರ ಶಿಕ್ಷಣ ಸಂಸ್ಥೆಗಳು ಸ್ವಯಂ ತಪಾಸಣೆ ಕೈಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಕಾಲೇಜುಗಳಲ್ಲಿ ಈ ರೀತಿಯ ತಪಾಸಣೆಯನ್ನು ನಿರಂತರ ನಡೆಸಿದರೆ, ಶಿಕ್ಷಣ ಸಂಸ್ಥೆಗಳ ಆವರಣವನ್ನು ಡ್ರಗ್ಸ್ ಮುಕ್ತ ಮಾಡಬಹುದು ಎಂದು ತಿಳಿಸಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm