ಬ್ರೇಕಿಂಗ್ ನ್ಯೂಸ್
11-08-26 10:23 pm HK News Staffer ಕರಾವಳಿ
ಮಂಗಳೂರು , ಆ.11: ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ ಆಯತಪ್ಪಿ ರೈಲು ಹಾಗೂ ಪ್ಲಾಟ್ಫಾರ್ಮ್ ನಡುವಿನ ಕಿರಿದಾದ ಜಾಗಕ್ಕೆ ಬೀಳುತ್ತಿದ್ದ ಪ್ರಯಾಣಿಕನೊಬ್ಬನನ್ನು ಕರ್ತವ್ಯದಲ್ಲಿದ್ದ ಪಾಯಿಂಟ್ಸ್ಮ್ಯಾನ್ ಸಂದೀಪ್ ನಾಯಕ್ ತಮ್ಮ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಕ್ಷಣಾರ್ಧದಲ್ಲಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಸಂದೀಪ್ ಅವರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಭೀಕರ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಸೋಮವಾರ ಬೆಳಗ್ಗೆ 11.11ಕ್ಕೆ ಸುರತ್ಕಲ್ ರೈಲು ನಿಲ್ದಾಣಕ್ಕೆ ಮಡ್ಗಾಂವ್–ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಎಕ್ಸ್ಪ್ರೆಸ್ (ರೈಲು ಸಂಖ್ಯೆ 10107) ಆಗಮಿಸಿತ್ತು. ಮಧ್ಯಾಹ್ನ 12.12ಕ್ಕೆ ಹಸಿರು ನಿಶಾನೆ ದೊರೆತ ಬಳಿಕ ರೈಲು ನಿಧಾನವಾಗಿ ಚಲಿಸಲು ಆರಂಭಿಸಿತ್ತು. ಈ ವೇಳೆ ರೈಲು ಹೊರಡುತ್ತಿರುವುದನ್ನು ಗಮನಿಸಿದ ಪ್ರಯಾಣಿಕನೊಬ್ಬ ಓಡಿಬಂದು ರೈಲಿಗೆ ಹತ್ತಲು ಪ್ರಯತ್ನಿಸಿದ್ದಾನೆ. ಆತುರದಲ್ಲಿ ಆಯತಪ್ಪಿದ ಪರಿಣಾಮ, ಆತ ಪ್ಲಾಟ್ಫಾರ್ಮ್ ಮತ್ತು ರೈಲಿನ ಬೋಗಿಯ ನಡುವಿನ ಕಿರಿದಾದ ಅಂತರಕ್ಕೆ ಬೀಳುವ ಹಂತಕ್ಕೆ ತಲುಪಿದ್ದಾನೆ. ಕ್ಷಣಮಾತ್ರದ ವಿಳಂಬವಾಗಿದ್ದರೂ ಪ್ರಯಾಣಿಕ ರೈಲಿನಡಿ ಸಿಲುಕಿ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.
ಸಮಯಪ್ರಜ್ಞೆ ಮೆರೆದ ಪಾಯಿಂಟ್ಸ್ಮ್ಯಾನ್ ಸಂದೀಪ್
ಪ್ರಯಾಣಿಕ ಅಪಾಯಕ್ಕೆ ಸಿಲುಕಿರುವುದನ್ನು ಗಮನಿಸಿದ ಕರ್ತವ್ಯನಿರತ ಪಾಯಿಂಟ್ಸ್ಮ್ಯಾನ್ ಸಂದೀಪ್ ನಾಯಕ್ ಕ್ಷಣಾರ್ಧದಲ್ಲೇ ಕಾರ್ಯಪ್ರವೃತ್ತರಾಗಿದ್ದಾರೆ. ತಮ್ಮ ಪ್ರಾಣದ ಹಂಗು ತೊರೆದು ಪ್ರಯಾಣಿಕನತ್ತ ಧಾವಿಸಿದ ಅವರು, ರೈಲಿನ ವೇಗ ಮತ್ತಷ್ಟು ಹೆಚ್ಚುವ ಮುನ್ನವೇ ಆತನನ್ನು ಬಲವಾಗಿ ಹಿಂದಕ್ಕೆ ಎಳೆದು ಪ್ಲಾಟ್ಫಾರ್ಮ್ಗೆ ಸುರಕ್ಷಿತವಾಗಿ ಕರೆತಂದಿದ್ದಾರೆ.
ಸಂದೀಪ್ ಅವರ ಈ ಕ್ಷಿಪ್ರ ಹಾಗೂ ಧೈರ್ಯಶಾಲಿ ಕಾರ್ಯಾಚರಣೆಯಿಂದಾಗಿ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ತಪ್ಪಿದೆ. ಕೆಲಕಾಲದ ಆತಂಕದ ಬಳಿಕ ರೈಲನ್ನು ಸುರಕ್ಷಿತವಾಗಿ ಮುಂದಿನ ನಿಲ್ದಾಣದತ್ತ ಕಳುಹಿಸಲಾಯಿತು. ರೈಲು ಮಧ್ಯಾಹ್ನ 12.16ಕ್ಕೆ ಸುರಕ್ಷಿತವಾಗಿ ಮುಂದಿನ ಪ್ರಯಾಣ ಮುಂದುವರಿಸಿತು.
₹10 ಸಾವಿರ ಬಹುಮಾನ ಘೋಷಣೆ;
ಕರ್ತವ್ಯದ ಜತೆಗೆ ಮಾನವೀಯತೆ ಮೆರೆದು ಪ್ರಯಾಣಿಕನ ಜೀವ ಉಳಿಸಿದ ಸಂದೀಪ್ ನಾಯಕ್ ಅವರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅವರ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶ್ಲಾಘಿಸಿರುವ ಕೊಂಕಣ ರೈಲ್ವೆ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಸಂದೀಪ್ ಅವರಿಗೆ ₹10,000 ನಗದು ಬಹುಮಾನ ಘೋಷಿಸಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm