ಬ್ರೇಕಿಂಗ್ ನ್ಯೂಸ್
16-08-26 04:14 pm HK News Staffer ಕರಾವಳಿ
ಮಂಗಳೂರು, ಆ.16: ಮಂಗಳೂರಿನ ಕೆಎಫ್ ಸಿ ರೆಸ್ಟೋರೆಂಟಿನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಫುಡ್ ಔಟ್ ಲೆಟ್ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ವಾರ್ನಿಂಗ್ ಮಾಡಿದ್ದಾರೆ. ಮುಂದೆ ಎಲ್ಲಾ ಕಡೆ ಇಂತಹ ರೈಡ್ ಗಳು ನಡೆಯುತ್ತದೆ. ನಿಮ್ಮ ಕಿಚನ್, ಸ್ಟೋರ್ ಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಇಟ್ಟುಕೊಳ್ಳಿ. ನೈರ್ಮಲ್ಯವನ್ನು ಕಾಪಾಡಿ. ಯಾವುದೇ ಸಂದರ್ಭದಲ್ಲೂ ನಾವು ರೈಡ್ ಮಾಡಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎಷ್ಟೇ ದೊಡ್ಡವರಾದರೂ ನಾವು ಬಿಡೋದಿಲ್ಲ. ಎಷ್ಟೇ ಸಣ್ಣವರಾದರೂ ನಾವು ಬಿಡೋದಿಲ್ಲ. ನಮಗೆ ಜನರ ಆರೋಗ್ಯ ಮುಖ್ಯ. ಕೋಪದಲ್ಲಿ ಅಥವಾ ಶಿಕ್ಷೆ ನೀಡಬೇಕು ಎಂದು ಯಾರ ವಿರುದ್ಧವೂ ರೈಡ್ ಮಾಡುತ್ತಿಲ್ಲ. ಜನರಿಗೆ ಪರಿಸ್ಥಿತಿ ಏನೆಂದು ತಿಳಿಸೋದು, ನೈರ್ಮಲ್ಯ ಕಾಪಾಡೋದು ನಮ್ಮ ಜವಾಬ್ದಾರಿ. ಬೆಂಗಳೂರಿನಲ್ಲಿ ಪಂಚತಾರ ಹೋಟೆಲ್ ಸೇರಿದಂತೆ ಫುಡ್ ಜೌಟ್ ಲೆಟ್ ಗಳಿಗೆ ರೈಡ್ ಆಗಿದೆ. ಅಷ್ಟಾದರೂ ಮಂಗಳೂರಿನಲ್ಲಿ ಈ ರೀತಿ ಮಾಡ್ತಾರೆ ಅಂದ್ರೆ ಇವರಿಗೆ ನಾವು ಏನೆಂದು ಹೇಳಬೇಕು. ಈಗಾಗಲೇ ಅಧಿಕಾರಿಗಳು ದಾಳಿ ಮಾಡಿ ಜಪ್ತಿ ಮಾಡಿದ್ದಾರೆ. ಮುಂದೆಯೂ ರೈಡ್ ಗಳು ಮುಂದುವರೆಯುತ್ತವೆ ಎಂದು ಹೇಳಿದರು.
ಇದೇ ವೇಳೆ, ಇನ್ಮುಂದೆ ಪಿಜಿ ಸೆಂಟರ್, ಹಾಸ್ಟೆಲ್ ಗಳಿಗೂ ದಾಳಿ ನಡೆಯಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ. ಕೇಟರಿಂಗ್ ಸಂಸ್ಥೆಗಳು, ಪಿಜಿಗಳನ್ನು ನಡೆಸುವವರು, ಹಾಸ್ಟೆಲ್ ನಡೆಸುವವರು ಆಹಾರ ಪೂರೈಕೆಯ ವ್ಯವಸ್ಥೆಗಳನ್ನು ಸರಿ ಇಟ್ಟುಕೊಳ್ಳಿ. ನಾವು ರೈಡ್ ಮಾಡುವಾಗ ವ್ಯವಸ್ಥೆ ಸರಿಯಿರದಿದ್ರೆ ಪಿಜಿ ನಡೆಸಲು ಅನುಮತಿ ಕೊಡೋದಿಲ್ಲ. ವಿದ್ಯಾರ್ಥಿಗಳು, ಯುವಕ, ಯುವತಿಯರು ಮನೆ ಬಿಟ್ಟು ನಿಮ್ಮ ಬಳಿಗೆ ಬಂದಿರುತ್ತಾರೆ. ಅವರಿಗೆ ಯಾರು ಕೂಡ ಇರೋದಿಲ್ಲ, ಸರಿಯಾದ ಊಟದ ವ್ಯವಸ್ಥೆ ಇರಲ್ಲ ಅಂತ ಪಿಜಿಗೆ ಬರುತ್ತಾರೆ. ನೀವು ಪಿಜಿ ನಡೆಸೋದಾದ್ರೆ ನಿಮ್ಮ ಸ್ವಂತ ಮಕ್ಕಳ ಹಾಗೆ, ನಿಮ್ಮ ಸಂಬಂಧಿಕರ ರೀತಿ ನೋಡಿಕೊಂಡು ಊಟದ ವ್ಯವಸ್ಥೆ ಮಾಡಬೇಕು. ಈ ರೀತಿಯ ವ್ಯವಸ್ಥೆ ಇರುವವರು ಮಾತ್ರ ಪಿಜಿ ಓಪನ್ ಮಾಡಿ. ಇಲ್ಲವಾದಲ್ಲಿ ನೀವು ಪಿಜಿ ನಡೆಸುವ ಅವಶ್ಯಕತೆ ಇಲ್ಲ. ಮುಂದೆ ನಾವು ರೈಡ್ ಮಾಡುವಾಗ ವ್ಯವಸ್ಥೆ ಸರಿಯಿಲ್ಲದಿದ್ರೆ ಪಿಜಿ ಸೆಂಟರ್ ನಡೆಸೋದಕ್ಕೆ ಅನುಮತಿ ಕೊಡೋದಿಲ್ಲ. ಸಂಬಂಧಪಟ್ಟ ಇಲಾಖೆಯವರೊಂದಿಗೆ ಮಾತನಾಡಿ ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm