ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm