ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm