ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm