ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm