ಬ್ರೇಕಿಂಗ್ ನ್ಯೂಸ್
21-08-26 08:17 pm HK News Staffer ಕರಾವಳಿ
ಮಂಗಳೂರು, ಆ.21: ಸರಿಯಾಗಿ ಬೇಯಿಸದ ಕಳಪೆ ದರ್ಜೆಯ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದಾರೆಂಬ ದೂರಿನ ಮೇರೆಗೆ ನಗರದ ಫಳ್ನೀರ್ ನಲ್ಲಿರುವ ಎಂಎಫ್ ಸಿ ರೆಸ್ಟೋರೆಂಟ್ ಮೇಲೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಹಾರ ಕಳಪೆ ಬಗ್ಗೆ ಕ್ಯೂ ಆರ್ ಕೋಡ್ ಅಭಿಯಾನಕ್ಕೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು ಇದರಲ್ಲಿ ಬಂದ ದೂರಿನ ಆಧಾರದಲ್ಲಿ ಮಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದಾರೆ.
ರೆಸ್ಟೋರೆಂಟ್ ನಲ್ಲಿ ಶೋರ್ಮಾ ಸೇರಿದಂತೆ ಮಾಂಸಾಹಾರ ಖಾದ್ಯಗಳು ಮತ್ತು ಅವುಗಳಿಗೆ ಬಳಸುವ ಬಣ್ಣಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಎಲ್ಲಾ ಖಾದ್ಯಗಳ ಸ್ಯಾಂಪಲ್ಸ್ ಸಂಗ್ರಹಿಸಿರುವ ಅಧಿಕಾರಿಗಳು ಅದನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡುವುದಾಗಿ ತಿಳಿಸಿದ್ದಾರೆ. ಚಿಕನ್ ಮತ್ತಿತರ ಮಾಂಸಾಹಾರಿ ಖಾದ್ಯಗಳಿಗೆ ಕೃತಕ ಬಣ್ಣಗಳನ್ನು ಬಳಸಿ ಆಕರ್ಷಕವಾಗಿಸುವುದರ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. '



ಹಸಿ ಮಾಂಸಗಳ ಸ್ಟೋರೇಜ್ ಮತ್ತು ಆಹಾರ ಪದಾರ್ಥಗಳ ತಯಾರಿ ಬಗ್ಗೆ ಶುಚಿತ್ವ ಇಟ್ಟುಕೊಂಡಿದ್ದಾರೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿ ಕೆಎಫ್ ಸಿ, ಮೆಕ್ ಡೊನಾಲ್ಡ್ ಕಂಪನಿಗಳ ಆಹಾರ ಮಳಿಗೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಇದೀಗ ಎಂಎಫ್ ಸಿ ಹೆಸರಿನ ಮಳಿಗೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಹೈಜೀನ್ ಇಟ್ಟುಕೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದು ಮಾಂಸ, ಆಹಾರ ಪದಾರ್ಥಗಳಲ್ಲಿ ಮಾಲಿನ್ಯ ಕಂಡುಬಂದಲ್ಲಿ ಕೇಸು ದಾಖಲಿಸುವುದಾಗಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಕೆಲವು ಬಣ್ಣಗಳನ್ನು ಬಳಸುವಂತಿಲ್ಲ, ಕೆಲವನ್ನು ನಿಗದಿಯಷ್ಟೇ ಬಳಸಬೇಕು. ಇದರ ಬಗ್ಗೆ ಸಾರ್ವಜನಿಕರೇ ಜಾಗೃತಿಯಾಗಬೇಕು. ಬಣ್ಣಗಳಿದ್ದ ಕಬಾಬ್ ತಿನ್ನದೆ ನಿರಾಕರಣೆ ಮಾಡಬೇಕು ಎಂದು ಪ್ರವೀಣ್ ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm