ಬ್ರೇಕಿಂಗ್ ನ್ಯೂಸ್
22-08-26 01:37 pm HK News Staffer ಕರಾವಳಿ
ಮಂಗಳೂರು, ಆ.22: ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡಿದ್ದೇವೆ. ಆದ್ರೆ ನಮ್ಮ ರಾಜ್ಯದಲ್ಲಿ ಕೃತಕ ಪನೀರ್ ಯಾರು ಬಳಸುತ್ತಿಲ್ಲ. ಹೊರಗಿನಿಂದ ಕೃತಕ ಪನೀರ್ ಬರೋ ಸಾದ್ಯತೆ ಇದೆ. ಆದ್ರಿಂದ ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್ ಮಾಡುತ್ತೇವೆ. ಕೇವಲ ಪನೀರ್ ಮಾತ್ರವಲ್ಲ. ಕೃತಕವಾಗಿ ತಯರಾಗೋ ಎಲ್ಲವು ಕೂಡ ರಾಜ್ಯದಲ್ಲಿ ಬ್ಯಾನ್ ಆಗಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಕಲಿ ಔಷಧ ಜಾಲ ಗಂಭೀರವಾಗಿದೆ, ಇದೊಂದು ದೊಡ್ಡ ಮಾಫಿಯಾ. ಇದು ಕರ್ನಾಟಕ ಮಾತ್ರ ಸೀಮಿತವಾಗಿಲ್ಲ, ಇದು ಬೇರೆ ಕಡೆಯೂ ಇದೆ. ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಅನಧಿಕೃತ ಕಂಪೆನಿ ಮಾಡಿ ಪೂರೈಕೆ ಮಾಡ್ತಾರೆ. ನಕಲಿ ಔಷಧ ದೊಡ್ಡ ಮಟ್ಟದ ಜಾಲ, ಹಾಗಾಗಿ ಎಸ್ಐಟಿ ಮಾಡಲು ಮನವಿ ಮಾಡಲಾಗಿತ್ತು. ನಕಲಿ ಜಾಲದಲ್ಲಿ ಜನೌಷಧಿ ಬಗ್ಗೆ ಗಮನಕ್ಕೆ ಬಂದಿಲ್ಲ. ಸರ್ಕಾರದ ಜನೌಷಧಿ ಕೇಂದ್ರದ ಬಗ್ಗೆಯೂ ನಮ್ಮ ಇಲಾಖೆ ಪರಿಶೀಲನೆ ಮಾಡಿದೆ. ಅವುಗಳ ಬಗ್ಗೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇದೆ. ರಾಜ್ಯದ ಉದ್ದಗಲಕ್ಕೂ ನಾವು ದಾಳಿ ಮಾಡ್ತಾ ಇದೇವೆ. ಅದರರ್ಥ ನಾವೇ ಎಲ್ಲಾ ಮಾಡಬೇಕು ಅಂತ ಅರ್ಥ ಅಲ್ಲ, ಜನಜಾಗೃತಿ ಮೂಡಿಸ್ತಾ ಇದೇವೆ. ಜನ ಸ್ವಯಂಪ್ರೇರಿತವಾಗಿ ಮುಂದೆ ಬಂದು ಕ್ಯೂ ಆರ್ ಕೋಡ್ ಮೂಲಕ ದೂರು ನೀಡಿ. ಆಹಾರ ಮತ್ತು ಔಷಧ ಸುರಕ್ಷತಾ ಇಲಾಖೆಗೆ ದೂರು ನೀಡಲು ಈ ಕ್ಯೂ ಆರ್ ಕೋಡ್ ಇರಲಿದೆ. ಈಗಾಗಲೇ 400 ಕ್ಕೂ ಅಧಿಕ ದೂರುಗಳು ಬಂದಿವೆ. ನಮ್ಮ ಪ್ರಥಮ ದಾಳಿ ಶಿಕ್ಷೆ ಕೊಡಲು ಅಲ್ಲ, ಅವರ ತಪ್ಪು ತೋರಿಸಲು ಮಾತ್ರ. ಸದ್ಯ ಎಲ್ಲಾ ಕಡೆ ನೋಟೀಸ್ ಕೊಟ್ಟು ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ನಿಗಾ ವಹಿಸಲು 60 ವರ್ಷ ಮೇಲ್ಪಟ್ಟ ನಿವೃತ್ತಿಯಾದ ವೈದ್ಯರು ಮತ್ತು ಆಹಾರ ತಜ್ಞರನ್ನು ಒಳಗೊಂಡ ವಾಚ್ ಟೀಂ ಮಾಡಲು ಯೋಜಿಸಲಾಗಿದೆ ಎಂದು ಹೇಳಿದರು.
ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರತಿಪಕ್ಷ ಇವತ್ತು ಜನ ಸಾಮಾನ್ಯರ ಟ್ಯಾಕ್ಸ್ ದುಡ್ಡು ವ್ಯರ್ಥ ಮಾಡ್ತಿದೆ. ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು. ಇದೊಂದು ಮಹತ್ವದ ಅಧಿವೇಶನ, ಬರ, ಅತಿವೃಷ್ಟಿ ಬಗ್ಗೆ ಚರ್ಚೆ ಆಗಬೇಕು. ಆದರೆ ಇದನ್ನ ಸಂಪೂರ್ಣ ವ್ಯರ್ಥ ಮಾಡಿರೋದನ್ನ ಜನರು ಕ್ಷಮಿಸಲ್ಲ. ರಾಜಕೀಯ ಮಾಡಲಿ, ಆದರೆ ರಾಜ್ಯಕ್ಕೆ ಇದರಿಂದ ಅನ್ಯಾಯ ಆಗಬಾರದು. ಸ್ಪಷ್ಟವಾದ ಕಾರಣ ಇಲ್ಲದೇ ಗದ್ದಲ ಮಾಡೋದರ ಹಿಂದೆ ಹಿಡನ್ ಅಜೆಂಡಾ ಇದೆ. ನೋಟೀಸ್ ಕೊಟ್ಟು ಚರ್ಚೆ ಮಾಡುವ ಬದಲು ರಾಜಕೀಯ ಮಾಡ್ತಿದಾರೆ. ನಾಗೇಂದ್ರ ಮಂತ್ರಿಯಾಗಿದ್ದಾಗ ಅನುದಾನ ದುರ್ಬಳಕೆ ಬಗ್ಗೆ ಆರೋಪದಲ್ಲಿ ಅವರು ರಾಜೀನಾಮೆ ಕೊಟ್ಟಿದ್ದರು. ರಾಜೀನಾಮೆ ಕೊಟ್ಡ ಬಳಿಕ ಸಚಿವ ಸ್ಥಾನದಿಂದ ದೂರ ಇದ್ದರು. ಅವರು ಈಗಾಗಲೇ ಎಲ್ಲಾ ರೀತಿಯ ತನಿಖೆ ಎದುರಿಸಿ ಕ್ಲೀನ್ ಚಿಟ್ ಸಿಕ್ಕಿದೆ. ಹೋದ ಹಣ ಕೂಡ ಮತ್ತೆ ಸರ್ಕಾರದ ಇಲಾಖೆಗೆ ವಾಪಾಸ್ ಬಂದಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ದವೂ ಕ್ರಮ ಆಗಿದೆ. ದೋಷ ಮುಕ್ತವಾಗಿ ಬಂದ ನಂತರ ಕಾನೂನು ಪ್ರಕಾರ ಮಂತ್ರಿ ಸ್ಥಾನ ಕೊಡಲಾಗಿದೆ. ಬಿಜೆಪಿಯವರು ಹೊರಗೆ ಪಾದಯಾತ್ರೆ ಮಾಡಲಿ, ಆದರೆ ವಿಧಾನಸಭೆಯಲ್ಲಿ ರಾಜಕೀಯ ಬೇಡ ಎಂದು ಖಾದರ್ ಹೇಳಿದರು.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm