ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm