ಬ್ರೇಕಿಂಗ್ ನ್ಯೂಸ್
08-01-21 10:45 pm Mangaluru Correspondant ಕರಾವಳಿ
ಕೊಣಾಜೆ, ಜ.8: ಯುವ ಕಾಂಗ್ರೆಸ್ ಗಾದಿಯ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪ್ಪಾಡ್ ಪರ ಪ್ರಚಾರಕ್ಕೆ ಬಂದ ಬೆಂಗಳೂರಿನ ಬೆಂಬಲಿಗರು ಮಕ್ಕಳನ್ನು ಅಪಹರಿಸಿದ್ದಾರೆಂಬ ವದಂತಿ ಕೇಳಿಬಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಮಹಮ್ಮದ್ ನಲಪ್ಪಾಡ್ ಸ್ಪರ್ಧಿಸುತ್ತಿದ್ದು, ಇದರ ಹಿನ್ನಲೆಯಲ್ಲಿ ಮುಡಿಪು ಭಾಗಕ್ಕೆ ಮಹಮ್ಮದ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮಹಮ್ಮದ್ ಹ್ಯಾರಿಸ್ ಬೆಂಬಲಿಗರು ದೇರಳಕಟ್ಟೆ ಜಂಕ್ಷನ್ ನಲ್ಲಿ ಹಾಟ್ ಚಿಪ್ಸ್ ಸೆಂಟರಲ್ಲಿ ಉಪಹಾರ ಮುಗಿಸಿ ಹೊರ ಬರುತ್ತಿದ್ದ ವೇಳೆ ಹೊರಗಿದ್ದ ಇಬ್ಬರು ಮಕ್ಕಳಿಗೆ ಚಾಕಲೇಟು ನೀಡಲು ಹೋಗಿದ್ದರು. ಈ ಸಂದರ್ಭದಲ್ಲಿ ಒಂದು ಮಗು ಜೋರಾಗಿ ಕಿರುಚಿದ್ದು ಸ್ಥಳೀಯರು ವಿಚಾರಿಸಲು ಬಂದಾಗ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎರಡು ಕಾರಲ್ಲಿ ಬೆಂಗಳೂರಿಗೆ ತಡಬಡಾಯಿಸಿ ಅಲ್ಲಿಂದ ಹೊರಟಿದ್ದರು.
ಇದರಿಂದ ಸಂಶಯಗೊಂಡು ಅವರನ್ನು ಸ್ಥಳೀಯರು ಬೆನ್ನತ್ತಿದ್ದು ನಾಟೆಕಲ್ ನಲ್ಲಿ ಅಡ್ಡ ಹಾಕಿ ಕೊಣಾಜೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು, ಮಕ್ಕಳ ಅಪಹರಣ ವಿಚಾರ ಸುಳ್ಳಾಗಿದೆ. ಕೇವಲ ವದಂತಿ ಕೇಳಿ ಸ್ಥಳೀಯರು ಉದ್ರಿಕ್ತರಾಗಿದ್ದರು ಅನ್ನೋದು ತಿಳಿದುಬಂದಿದೆ.
ಮಹಮ್ಮದ್ ನಲಪ್ಪಾಡ್ ಬೆಂಬಲಿಗರ ಕಾರಿನ ಹಿಂಭಾಗ ದಲ್ಲಿ ಮಹಮ್ಮದ್ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದರೆನ್ನಲಾಗಿದೆ. ಘಟನೆಯ ಲಾಭವೆತ್ತಲೆಂದೇ ಕೊಣಾಜೆ ಠಾಣೆಯಲ್ಲಿ ಕೆಲ ಕಾಲ ಜನಜಂಗುಳಿ ಜಮಾವಣೆಯಾಗಿದ್ದು ಪೊಲೀಸರು ಜನರನ್ನು ಚದುರಿಸಿದ್ದಾರೆ.
Supporters of Mohammed Haris Nalapad who is contesting elections for the post of Youth Congress state president are facing allegations of kidnapping a child in Konaje, Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm