ಬ್ರೇಕಿಂಗ್ ನ್ಯೂಸ್
25-08-26 09:37 pm HK News Staffer ಕರಾವಳಿ
ಉಳ್ಳಾಲ, ಆ.25: ಸಾಂಬಾರಿನಲ್ಲಿ ಜಿರಳೆ ಇದೆಯೆಂದು ದೂರು ನೀಡಿದ್ದಾರೆಂಬ ನೆಪದಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸರ್ಕಾರಿ ರಜಾ ದಿನದಂದೇ ತೊಕ್ಕೊಟ್ಟಿನ ವೃಂದಾವನ ಹೊಟೇಲಿಗೆ ದಾಳಿ ನಡೆಸಿದ್ದಾರೆ. ಅಡುಗೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದು, ಅಲ್ಲಿ ಜಿರಳೆ ಹರಿದಾಡುತ್ತಿದೆಯೆಂದು ಹೇಳಿ ಶುಚಿತ್ವ ಕಾಪಾಡದ ಹೊಟೇಲ್ ಮಾಲಕರಿಗೆ ನೋಟೀಸು ನೀಡಿ, ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಹೇಳಿ ನಿರ್ಗಮಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಮೆಕ್ಡೊನಾಲ್ಡ್ಸ್, ಕೆಎಫ್ಸಿ ಹಾಗೂ ಕೆಲವು ಪ್ರಮುಖ ರೆಸ್ಟೋರೆಂಟ್ಗಳ ಮೇಲೆ ಡಾ.ಪ್ರವೀಣ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಈದ್ ಮಿಲಾದ್ ರಜಾ ದಿನವೂ ಡಾ.ಪ್ರವೀಣ್ ಕುಮಾರ್ ಆಹಾರ ಇಲಾಖೆಯ ಕಾರು ಚಾಲಕನೊಂದಿಗೆ ಒಬ್ಬಂಟಿಯಾಗಿ ತೊಕ್ಕೊಟ್ಟಿನ ವೃಂದಾವನ ಹೊಟೇಲ್ ಮೇಲೆ ದಾಳಿ ನಾಟಕ ಮಾಡಿದ್ದು ತಪಾಸಣೆ ನಡೆಸಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಪ್ರವೀಣ್ ಅವರು ತನ್ನ ಇಲಾಖೆಯ ಕಾರು ಚಾಲಕ ಲೋಕೇಶ್ ಅವರೊಂದಿಗೆ ಹೊಟೇಲ್ ಗೆ ಬಂದಿದ್ದು, ಶಟರ್ ಹಾಕಿ ತಪಾಸಣೆ ಕೈಗೊಂಡಿದ್ದಾರೆ.
ಸಾಂಬಾರಿನಲ್ಲಿ ಜಿರಳೆ ಇರುವ ದೂರಿಗೆ ಜಿಲ್ಲಾ ಮಟ್ಟದ ಅಧಿಕಾರಿಯೇ ಶೋಧ ಕಾರ್ಯಕ್ಕೆ ಬಂದಿರುವುದು ಸ್ಥಳೀಯರನ್ನ ಬೆರಗುಗೊಳಿಸಿದೆ. ಒಬ್ಬರೇ ಅಧಿಕಾರಿ ಹೊಟೇಲಿನ ಶಟರ್ ಎಳೆದು ಜಿರಳೆಗಾಗಿ ಶೋಧ ನಡೆಸಿದ್ದು ಸ್ಥಳೀಯರಿಗೆ ಅನುಮಾನ ಮೂಡಿಸಿದೆ. ಹೀಗಾಗಿ ಸ್ಥಳೀಯ ವ್ಯಾಪಾರಿಗಳು ಹೆಡ್ ಲೈನ್ ಕರ್ನಾಟಕ ಮಾಧ್ಯಮ ಪ್ರತಿನಿಧಿಯನ್ನ ಸ್ಥಳಕ್ಕೆ ಕರೆಸಿದ್ದಾರೆ. ಮಾಧ್ಯಮ ಪ್ರತಿನಿಧಿಯನ್ನ ಕಂಡ ಆಹಾರ ಸುರಕ್ಷತಾ ಅಧಿಕಾರಿಗಳು ತರಕಾರಿ ಹಾಗೂ ಡಬ್ಬದ ಮೇಲಿದ್ದ ಒಂದೆರಡು ಜಿರಳೆ ಮರಿಗಳನ್ನ ತೋರಿಸಿ ಭಾರೀ ದೊಡ್ಡ ಕಾರ್ಯಾಚರಣೆ ನಡೆಸಿರುವ ರೀತಿ ಬಿಂಬಿಸಿದ್ದಾರೆ. ಬಳಿಕ ಹೊಟೇಲ್ ಮಾಲಕ ಬಂದ ತಕ್ಷಣವೇ ಅವರಲ್ಲಿ ಮೊಬೈಲ್ ನಂಬರ್ ಇಸ್ಕೊಂಡು ಕಾರ್ಯಾಚರಣೆ ನಿಲ್ಲಿಸಿ ತೆರಳಿದ್ದಾರೆ.











ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಡಾ.ಪ್ರವೀಣ್ ಕುಮಾರ್, ಗ್ರಾಹಕನೋರ್ವ ಸಾಂಬಾರಿನಲ್ಲಿ ಜಿರಳೆಯಿದೆಯೆಂದು ದೂರು ನೀಡಿರುವ ನಿಟ್ಟಿನಲ್ಲಿ ದಾಳಿಯನ್ನ ನಡೆಸಲಾಗಿದೆ. ಹೊಟೇಲಿನ ಅಡುಗೆ ಕೋಣೆಯಲ್ಲಿ ಆಹಾರ ದಾಸ್ತಾನು ಮಾಡಲು ಪ್ರತ್ಯೇಕ ಕೊಠಡಿಯಿಲ್ಲದೆ, ಎಲ್ಲೆಂದರಲ್ಲಿ ಆಹಾರ ಪದಾರ್ಥಗಳನ್ನ ರಾಶಿ ಹಾಕಲಾಗಿತ್ತು. ಎಲ್ಲಾ ಆಹಾರ ಪದಾರ್ಥಗಳನ್ನ ತೆರವುಗೊಳಿಸಿ ಅಡುಗೆ ಕೋಣೆಯನ್ನ ತೊಳೆಸಿ ಶುಚಿಗೊಳಿಸಲಾಗಿದೆ. ಆಹಾರ ಪದಾರ್ಥಗಳನ್ನ ಪ್ರತ್ಯೇಕವಾಗಿ ಜೋಡಿಸಿಡಲು ಹೊಟೇಲು ಮಾಲಕರಿಗೆ ಸೂಚನೆ ನೀಡಲಾಗಿದೆ. ಶುಚಿತ್ವ ಕಾಪಾಡದ ನಿಟ್ಟಿನಲ್ಲಿ ಹೊಟೇಲು ಮಾಲಕರಿಗೆ ನೋಟೀಸು ನೀಡಿ, ಎಡಿಸಿ (ಅಪರ ಜಿಲ್ಲಾಧಿಕಾರಿ) ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸೋದಾಗಿ ತಿಳಿಸಿದ್ದಾರೆ.
ತೊಕ್ಕೊಟ್ಟಿನಲ್ಲಿ ಯಾವುದೇ ಉಪಹಾರ ಅಥವಾ ಊಟದ ಹೊಟೇಲ್ ಗಳಿಗೆ ದಾಳಿ ನಡೆಸಿದರೂ ಶುಚಿತ್ವವಿಲ್ಲದ ದೃಶ್ಯಗಳು ಕಾಣಸಿಗುವುದು ಸಾಮಾನ್ಯ. ಅಧಿಕಾರಿಗಳು ಆಗಿಂದಾಗ್ಗೆ ಹೊಟೇಲ್, ಆಹಾರ ಮಾರಾಟ ಕೇಂದ್ರಗಳಿಗೆ ದಾಳಿ ಮಾಡಿ ಆಹಾರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಹಸನದ ಅಗತ್ಯ ಬೀಳದು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm