ಬ್ರೇಕಿಂಗ್ ನ್ಯೂಸ್
31-08-26 05:09 pm HK News Staffer ಕರಾವಳಿ
ಮಂಗಳೂರು, ಆ.31: ಮಂಗಳೂರಿನಲ್ಲಿ ಆಟೋ ದರವನ್ನು ಕನಿಷ್ಠ ಒಂದೂವರೆ ಕಿಮೀಗೆ ರು.40ಕ್ಕೆ ಹೆಚ್ಚಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಈ ಹಿಂದೆ ಕನಿಷ್ಠ ದರ 35 ರೂ. ಇತ್ತು. ತೈಲ ದರ ಏರಿಕೆಯಾದರೂ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನಲ್ಲಿ ಆಟೋ ದರ ಏರಿಕೆಯಾಗಿಲ್ಲ. ಇದರಿಂದಾಗಿ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದು ದರ ಏರಿಕೆ ಆಗಲೇಬೇಕು ಎಂದು ಆಟೋ ಚಾಲಕರ ಸಂಘದ ವತಿಯಿಂದ ಒತ್ತಾಯ ಮಾಡಲಾಗಿತ್ತು.
ಸಭೆಯಲ್ಲಿ ಹಲವು ಜನಪರ ಹೋರಾಟಗಾರರು ತಮ್ಮ ಅಭಿಪ್ರಾಯ ಹೇಳಿದ್ದರು. ಕೊನೆಗೆ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆಟೋ ದರ ಪರಿಷ್ಕರಣೆಯ ಪರವಾಗಿ ನಿರ್ಧಾರಕ್ಕೆ ಬಂದಿದ್ದು ಈಗ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಗರಿಷ್ಠ ಮೂರು ಜನ ಪ್ರಯಾಣಿಕರಿಗೆ ಒಂದೂವರೆ ಕಿಮೀ ಪ್ರಯಾಣಕ್ಕೆ 40 ರೂ.ಗೆ ಏರಿಸಲಾಗಿದೆ. ಅಲ್ಲದೆ, ಆನಂತರ ಪ್ರತಿ ಕಿಮೀ ದೂರಕ್ಕೆ ಹೆಚ್ಚುವರಿ 20 ರೂ. ದರ ಪಡೆಯಲು ಅನುಮತಿಸಲಾಗಿದೆ. ಕಾಯುವಿಕೆಗೆ ಮೊದಲ ಹತ್ತು ನಿಮಿಷ ಉಚಿತವಾಗಿದ್ದು ನಂತರದ 15 ನಿಮಿಷದ ವರೆಗೆ ಅಥವಾ ಹೆಚ್ಚುವರಿ ಅವಧಿಗೆ ಐದು ರೂ.ನಂತೆ ಶುಲ್ಕ ಭರಿಸಲು ಅವಕಾಶ ನೀಡಲಾಗಿದೆ. ರಾತ್ರಿ ವೇಳೆಯಲ್ಲಿ ಹತ್ತು ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗಿನ ಅವಧಿಯಲ್ಲಿ ಮಾತ್ರ ನಿಗದಿತ ದರದ ಒಂದೂವರೆ ಪಟ್ಟು ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 11:04 pm
HK News Staffer
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
ಮಧ್ಯರಾತ್ರಿ ಅಪಾರ್ಟ್ಮೆಂಟ್ ಲಿಫ್ಟ್ನಲ್ಲಿ ಸಿಲುಕಿದ...
31-08-26 04:19 pm
31-08-26 09:50 pm
HK News Staffer
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಡ್ರಾಪ್ ನೀ...
31-08-26 03:48 pm
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm