ಬ್ರೇಕಿಂಗ್ ನ್ಯೂಸ್
01-09-26 01:47 pm HK News Staffer ಕರಾವಳಿ
ಮಂಗಳೂರು, ಸೆ.1: ಬೆಂಗಳೂರಿನಿಂದ ಹೊರಗೆ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ಸೆ.18ರಂದು ಕರಾವಳಿಯ ಮಂಗಳೂರಿನಲ್ಲಿ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳ ಬೆಳವಣಿಗೆ, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ಸಿದ್ಧತೆ ನಡೆಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ವಾಲ್ಮೀಕಿ ಹಗರಣದ ನೆಪದಲ್ಲಿ ಬಿಜೆಪಿ ಪಾದಯಾತ್ರೆ ಕೈಗೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅಧಿವೇಶನವನ್ನು ರಾಜಕೀಯ ಪಕ್ಷದ ಪ್ರತಿಭಟನೆಗೆ ವೇದಿಕೆ ಮಾಡಬಾರದು. ಹೊರಗೆ ಎಷ್ಟು ಬೇಕಾದರೂ ಮಾಡಲಿ, ನಾವು ಏನೂ ಹೇಳಲ್ಲ. ಅಧಿವೇಶನ ಜನರ ಸಮಸ್ಯೆಗಳನ್ನು ಚರ್ಚೆ ಮಾಡಿ ಪರಿಹಾರ ಕೊಡುವ ವೇದಿಕೆಯಾಗಿದೆ. ಆದರೆ ಅಧಿವೇಶನವನ್ನೇ ಮಾಡಲು ಬಿಡದೆ ಬಿಜೆಪಿ ರಾಜ್ಯದ ಜನರಿಗೆ ವಂಚನೆ ಮಾಡಿದೆ. ನಾಗೇಂದ್ರ ಈಗಾಗಲೇ ರಾಜೀನಾಮೆ ಕೊಟ್ಟಿದ್ದಾರೆ. 99% ಹಣವನ್ನೂ ರಿಕವರಿ ಮಾಡಲಾಗಿದೆ. ಸರ್ಕಾರದ ಹಣ ರಿಟರ್ನ್ ಬಂದಿರೋದು ಇದೇ ಮೊದಲು.
ಅಕ್ರಮ ಎಸಗಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗಿದೆ. ಅಲ್ಲದೆ, ನಾಗೇಂದ್ರ ಅವರಿಗೆ ತನಿಖಾ ಸಂಸ್ಥೆ ಕ್ಲೀನ್ ಚಿಟ್ ಕೊಟ್ಟಿದೆ. ಮಂತ್ರಿಯಾದ ಬಳಿಕ ಈ ಘಟನೆ ಆದ ಕಾರಣ ನೈತಿಕತೆಯ ಬದ್ದತೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಹಾಗೆ ನೋಡಿದರೆ ಈ ಪ್ರಕರಣದಲ್ಲೂ ಬಿಜೆಪಿಯ ಬಹಳಷ್ಟು ಮುಖಂಡರಿಗೆ ವಿಚಾರಣೆಗೆ ನೊಟೀಸ್ ಕೊಟ್ಟಿದ್ದಾರೆ. ಬಿಜೆಪಿಯವರು ರಾಜೀನಾಮೆ ಕೊಟ್ಟು ನೈತಿಕ ಬದ್ಧತೆ ತೋರಿಸಲಿ ಎಂದು ಹೇಳಿದರು.
ಪುತ್ತೂರು ಶಾಸಕ ಅಶೋಕ್ ರೈ ಅವರು ಕೆಆರ್ ಐಡಿಎಲ್ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ ಪ್ರಶ್ನೆಗೆ, ನಮ್ಮ ಹೆಸರು ಹೇಳಿ ಹಣ ವಸೂಲಿ ಮಾಡಿರೋದು ಗಮನಕ್ಕೆ ಬಂದಿಲ್ಲ. ಹಾಗಿದ್ದಲ್ಲಿ ನಾನೇ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕ್ಷೇತ್ರದ ಇಂಜಿನಿಯರ್ ಗಳು ಆ ವಿಚಾರದಲ್ಲಿ ಇಲ್ಲ. ನಮ್ಮ ಜಿಲ್ಲೆಯ ಇತಿಹಾಸದಲ್ಲಿ ಆ ರೀತಿಯ ಘಟನೆ ಆಗಿಲ್ಲ. ಇಂಜಿನಿಯರ್ ಗಳು ಬರುವ ಸಂಧರ್ಭದಲ್ಲೇ ಹದ್ದುಬಸ್ತುನಲ್ಲಿ ಇಟ್ಟುಕೊಳ್ಳುತ್ತೇವೆ. ಅಶೋಕ್ ರೈ ಜೊತೆ ಬೇರೆ ವಿಷಯಕ್ಕೆ ಫೋನ್ ನಲ್ಲಿ ಮಾತನಾಡಿದ್ದೇನೆ. ಈ ಆರೋಪದ ಬಗ್ಗೆ ನನ್ನ ಗಮನಕ್ಕೆ ಇಲ್ಲ. ತನಿಖೆ ನಡೆಸಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
01-09-26 12:19 pm
HK News Staffer
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
01-09-26 01:47 pm
HK News Staffer
Ashok Rai, Puttur News: 'ಉಸ್ತುವಾರಿ ಸಚಿವರಿಗೆ ಹ...
31-08-26 11:04 pm
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
01-09-26 02:58 pm
HK News Staffer
Thokottu Accident, Mangalore: ಪಾದಚಾರಿಗೆ ಡಿಕ್ಕ...
01-09-26 01:41 pm
ಶಿವಮೊಗ್ಗದ ಪಿಡಿಒ ದಂಪತಿಗಳ ಮನೆಗೆ ಲೋಕಾ ದಾಳಿ ಅಲ್ಲ....
01-09-26 12:53 pm
ರಾಮನಗರದ ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ತಯಾರಿ...
31-08-26 09:50 pm
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm