ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.

ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.

ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm