ಬ್ರೇಕಿಂಗ್ ನ್ಯೂಸ್
02-09-26 10:30 pm HK News Desk ಕರಾವಳಿ
ಮಂಗಳೂರು, ಸೆ.2: ಸಚಿವರ ಹೆಸರಲ್ಲಿ ಕಮಿಷನ್ ಕೇಳುತ್ತಿದ್ದಾರೆಂಬ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಹಾಗೂ ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಕೆ.ಆರ್.ಐ.ಡಿ.ಎಲ್ ಸಂಸ್ಥೆಯಿಂದ ನಿರ್ವಹಿಸಲಾಗುತ್ತಿರುವ ಸರಕಾರಿ ಕಾಮಗಾರಿಗಳಿಗೆ ಸಾಮಾಗ್ರಿ ಪೂರೈಸುವ ಗ್ರೂಪ್ ಲೀಡರ್ಗಳಿಂದ ಇಲಾಖಾ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಡುವುದಕ್ಕಾಗಿ ಎಂದು ಕಮಿಷನ್ ಪಡೆಯುತ್ತಿರುವುದಾಗಿ ಆರೋಪವಿದೆ. ಈ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ತಕ್ಷಣ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುತ್ತಾರೆ.

ಈ ಹಿನ್ನೆಲೆಯಲ್ಲಿ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಮಂಗಳೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಈ ಮೂಲಕ ಕೋರುತ್ತೇನೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಕೆಆರ್ ಐಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am