ಬ್ರೇಕಿಂಗ್ ನ್ಯೂಸ್
09-01-21 03:01 pm Mangalore Correspondent ಕರಾವಳಿ
ಮಂಗಳೂರು, ಜ.9: ಕರಾವಳಿಯಲ್ಲಿ ದೈವಗಳ ಕಾರಣಿಕ ನಂಬದವರಿಲ್ಲ. ಕಷ್ಟಕಾಲದಲ್ಲಿ ಕೈಮುಗಿದು ಬೇಡಿಕೊಂಡರೆ ಕೈಹಿಡಿಯುತ್ತವೆ ಅನ್ನೋ ಅಚಲ ನಂಬಿಕೆ ಜನರದ್ದು. ಈ ನಂಬಿಕೆಗೆ ಪೊಲೀಸರು, ಆಡಳಿತ ವರ್ಗವೂ ಹೊರತಾಗಿಲ್ಲ. ಆದರೆ, ಇಲ್ಲೊಂದು ಕಡೆ ಸ್ವತಃ ಪೊಲೀಸ್ ಇಲಾಖೆಯವರೇ ಸೇರಿಕೊಂಡು ಪ್ರತಿ ವರ್ಷ ಕೋಲ ಒಪ್ಪಿಸುವುದನ್ನು ವಾಡಿಕೆಯಾಗಿ ನಡೆಸಿಕೊಂಡು ಬಂದಿದ್ದಾರೆ.

ಹೌದು.. ಕಾರ್ಕಳ ತಾಲೂಕಿನಲ್ಲಿ ನಗರ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರೇ ಸೇರಿಕೊಂಡು ಗುಳಿಗ ದೈವಕ್ಕೆ ಹರಕೆ ಕೋಲ ಒಪ್ಪಿಸುತ್ತಾರೆ. ಕುಕ್ಕಂದೂರಿನ ಪೊಲೀಸ್ ವಸತಿ ಗೃಹದ ಬಳಿಯ ಹುಡ್ಕೋ ಕಾಲನಿಯಲ್ಲಿ ಇರುವ ಗುಳಿಗ ದೈವಕ್ಕೆ ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಈ ರೀತಿ ಕೋಲದ ಹರಕೆ ಒಪ್ಪಿಸುವುದು ವಾಡಿಕೆಯಾಗಿ ಬಂದಿದೆ. ಕಳೆದ ಬಾರಿ ಲಾಕ್ಡೌನ್ ಇದ್ದುದರಿಂದ ಎಪ್ರಿಲ್, ಮೇ ತಿಂಗಳಲ್ಲಿ ವರ್ಷಾವಧಿ ಕೋಲ ಸೇವೆಗಳು ನಡೆದಿರಲಿಲ್ಲ. ಪೊಲೀಸರ ಕೋಲ ಸೇವೆ ಪ್ರತಿ ವರ್ಷ ಎಪ್ರಿಲ್ ತಿಂಗಳಲ್ಲಿ ನಡೆಯುವುದಿತ್ತು. ಕಳೆದ ಬಾರಿ ಉಳಿಕೆಯಾಗಿದ್ದ ಹರಕೆ ಸೇವೆಯನ್ನು ಇಂದು ರಾತ್ರಿ (ಜ.9, ಶನಿವಾರ) ಪೊಲೀಸರು ಒಪ್ಪಿಸುತ್ತಿದ್ದಾರೆ.

ಹುಡ್ಕೋ ಕಾಲನಿಯಲ್ಲಿರುವ ಗುಳಿಗ ದೈವದ ಕಟ್ಟೆ ಮತ್ತು ಅದರ ಭಂಡಾರ ಜೈನ ಮನೆತನದ ಉಸ್ತುವಾರಿಯಲ್ಲಿದೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಮನೆಯವರ ಲೆಕ್ಕದಲ್ಲಿ ಕೋಲ ಒಪ್ಪಿಸಿ, ಬಳಿಕ ಸರದಿಯಂತೆ ಮೇ ತಿಂಗಳ ವರೆಗೂ ಕೋಲ ಸೇವೆ ನಡೆಯುತ್ತದೆ. ಈ ಬಾರಿಯೂ ವಾರ್ಷಿಕ ಸೇವೆ ನಡೆದು ಹರಕೆ ಕೋಲಗಳು ಆರಂಭಗೊಂಡಿವೆ. ಕಾರ್ಕಳ ಪೊಲೀಸ್ ಠಾಣೆ, ತಾಲೂಕು ಆಡಳಿತ, ರೆವಿನ್ಯೂ ಇಲಾಖೆ ಹೀಗೆ ಸರಕಾರಿ ವ್ಯವಸ್ಥೆಯಿಂದಲೇ ಗುಳಿಗನಿಗೆ ಹಲವಾರು ಹರಕೆ ಕೋಲ ಸಮರ್ಪಣೆಯಾಗುವುದು ಅಲ್ಲಿನ ವಿಶೇಷ.

ಹರಕೆ ಸೇವೆಯಲ್ಲಿ ನಗರ ಮತ್ತು ಗ್ರಾಮಾಂತರ ಠಾಣೆಯ ಎಲ್ಲ ಸಿಬಂದಿ ಮತ್ತು ಅವರ ಕುಟುಂಬಸ್ಥರು ಪಾಲ್ಗೊಳ್ಳುತ್ತಾರೆ. ಮಾಹಿತಿ ಪ್ರಕಾರ, ಕಳೆದ 40 ವರ್ಷಗಳಿಂದಲೂ ಈ ರೀತಿ ಪೊಲೀಸರು ಗುಳಿಗನಿಗೆ ಪ್ರತಿವರ್ಷ ಕೋಲ ಸೇವೆ ಅರ್ಪಿಸುತ್ತಿದ್ದಾರೆ. ಇದರ ಖರ್ಚನ್ನು ಪೊಲೀಸ್ ಸಿಬಂದಿಯೇ ಸೇರಿಕೊಂಡು ಭರಿಸುತ್ತಾರೆ. ಹರಕೆ ಸೇವೆಯ ಜೊತೆಗೆ ಸೇರಿದ ಸಾರ್ವಜನಿಕರು ಮತ್ತು ಪೊಲೀಸ್ ಸಿಬಂದಿಗಳಿಗೆ ಊಟದ ವ್ಯವಸ್ಥೆಯನ್ನೂ ಮಾಡುತ್ತಾರೆ. ಊಟ, ಹರಕೆ ಸೇವೆಗಳಿಗೆ ಸುಮಾರು 50 ಸಾವಿರಕ್ಕಿಂತ ಹೆಚ್ಚು ಖರ್ಚು ಬರುತ್ತಿದ್ದು ಪ್ರತಿ ವರ್ಷ ನಿಷ್ಠೆಯಿಂದ ನಡೆಸಿಕೊಂಡು ಬಂದಿದ್ದಾರೆ.

ಈ ಬಗ್ಗೆ ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರಲ್ಲಿ ಕೇಳಿದರೆ, ಅಲ್ಲಿನ ಗುಳಿಗನಿಗೆ ಭಾರೀ ಕಾರಣಿಕ ಇದೆ. ಮೊದಲಿನಿಂದಲೂ ಪ್ರತಿವರ್ಷ ಈ ಸೇವೆ ನಡೆಸುತ್ತಾ ಬರಲಾಗಿದೆ. ನಮ್ಮ ಲೆಕ್ಕದಲ್ಲಿ ಕೋಲದ ಹರಕೆ ನೀಡುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಹಿಂದೆಲ್ಲಾ ಏನಾದ್ರೂ ತಪ್ಪಿಸಿಕೊಂಡು ಹೋದರೆ, ಶಸ್ತ್ರಾಸ್ತ್ರಗಳು ಕಾಣೆಯಾದರೆ ಗುಳಿಗನಿಗೆ ಹರಕೆ ಹೇಳಿದರೆ, ಕೋಲದ ಸಂದರ್ಭ ಕೇಳಿಕೊಂಡಿದ್ದ ವೇಳೆ ಅದು ಪತ್ತೆಯಾದ ಉದಾಹರಣೆಗಳಿವೆ. ಇದರಿಂದ ಹರಕೆ ಕೋಲ ನೀಡುವ ಸಂಪ್ರದಾಯ ಬೆಳೆದು ಬಂದದ್ದಿರಬೇಕು ಎಂದು ಹೇಳುತ್ತಾರೆ.
Karkala Police personals offer kola in the aspect of vow
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm