ಬ್ರೇಕಿಂಗ್ ನ್ಯೂಸ್
09-01-21 03:01 pm Mangalore Correspondent ಕರಾವಳಿ
ಮಂಗಳೂರು, ಜ.9: ಕರಾವಳಿಯಲ್ಲಿ ದೈವಗಳ ಕಾರಣಿಕ ನಂಬದವರಿಲ್ಲ. ಕಷ್ಟಕಾಲದಲ್ಲಿ ಕೈಮುಗಿದು ಬೇಡಿಕೊಂಡರೆ ಕೈಹಿಡಿಯುತ್ತವೆ ಅನ್ನೋ ಅಚಲ ನಂಬಿಕೆ ಜನರದ್ದು. ಈ ನಂಬಿಕೆಗೆ ಪೊಲೀಸರು, ಆಡಳಿತ ವರ್ಗವೂ ಹೊರತಾಗಿಲ್ಲ. ಆದರೆ, ಇಲ್ಲೊಂದು ಕಡೆ ಸ್ವತಃ ಪೊಲೀಸ್ ಇಲಾಖೆಯವರೇ ಸೇರಿಕೊಂಡು ಪ್ರತಿ ವರ್ಷ ಕೋಲ ಒಪ್ಪಿಸುವುದನ್ನು ವಾಡಿಕೆಯಾಗಿ ನಡೆಸಿಕೊಂಡು ಬಂದಿದ್ದಾರೆ.

ಹೌದು.. ಕಾರ್ಕಳ ತಾಲೂಕಿನಲ್ಲಿ ನಗರ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರೇ ಸೇರಿಕೊಂಡು ಗುಳಿಗ ದೈವಕ್ಕೆ ಹರಕೆ ಕೋಲ ಒಪ್ಪಿಸುತ್ತಾರೆ. ಕುಕ್ಕಂದೂರಿನ ಪೊಲೀಸ್ ವಸತಿ ಗೃಹದ ಬಳಿಯ ಹುಡ್ಕೋ ಕಾಲನಿಯಲ್ಲಿ ಇರುವ ಗುಳಿಗ ದೈವಕ್ಕೆ ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಈ ರೀತಿ ಕೋಲದ ಹರಕೆ ಒಪ್ಪಿಸುವುದು ವಾಡಿಕೆಯಾಗಿ ಬಂದಿದೆ. ಕಳೆದ ಬಾರಿ ಲಾಕ್ಡೌನ್ ಇದ್ದುದರಿಂದ ಎಪ್ರಿಲ್, ಮೇ ತಿಂಗಳಲ್ಲಿ ವರ್ಷಾವಧಿ ಕೋಲ ಸೇವೆಗಳು ನಡೆದಿರಲಿಲ್ಲ. ಪೊಲೀಸರ ಕೋಲ ಸೇವೆ ಪ್ರತಿ ವರ್ಷ ಎಪ್ರಿಲ್ ತಿಂಗಳಲ್ಲಿ ನಡೆಯುವುದಿತ್ತು. ಕಳೆದ ಬಾರಿ ಉಳಿಕೆಯಾಗಿದ್ದ ಹರಕೆ ಸೇವೆಯನ್ನು ಇಂದು ರಾತ್ರಿ (ಜ.9, ಶನಿವಾರ) ಪೊಲೀಸರು ಒಪ್ಪಿಸುತ್ತಿದ್ದಾರೆ.

ಹುಡ್ಕೋ ಕಾಲನಿಯಲ್ಲಿರುವ ಗುಳಿಗ ದೈವದ ಕಟ್ಟೆ ಮತ್ತು ಅದರ ಭಂಡಾರ ಜೈನ ಮನೆತನದ ಉಸ್ತುವಾರಿಯಲ್ಲಿದೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಮನೆಯವರ ಲೆಕ್ಕದಲ್ಲಿ ಕೋಲ ಒಪ್ಪಿಸಿ, ಬಳಿಕ ಸರದಿಯಂತೆ ಮೇ ತಿಂಗಳ ವರೆಗೂ ಕೋಲ ಸೇವೆ ನಡೆಯುತ್ತದೆ. ಈ ಬಾರಿಯೂ ವಾರ್ಷಿಕ ಸೇವೆ ನಡೆದು ಹರಕೆ ಕೋಲಗಳು ಆರಂಭಗೊಂಡಿವೆ. ಕಾರ್ಕಳ ಪೊಲೀಸ್ ಠಾಣೆ, ತಾಲೂಕು ಆಡಳಿತ, ರೆವಿನ್ಯೂ ಇಲಾಖೆ ಹೀಗೆ ಸರಕಾರಿ ವ್ಯವಸ್ಥೆಯಿಂದಲೇ ಗುಳಿಗನಿಗೆ ಹಲವಾರು ಹರಕೆ ಕೋಲ ಸಮರ್ಪಣೆಯಾಗುವುದು ಅಲ್ಲಿನ ವಿಶೇಷ.

ಹರಕೆ ಸೇವೆಯಲ್ಲಿ ನಗರ ಮತ್ತು ಗ್ರಾಮಾಂತರ ಠಾಣೆಯ ಎಲ್ಲ ಸಿಬಂದಿ ಮತ್ತು ಅವರ ಕುಟುಂಬಸ್ಥರು ಪಾಲ್ಗೊಳ್ಳುತ್ತಾರೆ. ಮಾಹಿತಿ ಪ್ರಕಾರ, ಕಳೆದ 40 ವರ್ಷಗಳಿಂದಲೂ ಈ ರೀತಿ ಪೊಲೀಸರು ಗುಳಿಗನಿಗೆ ಪ್ರತಿವರ್ಷ ಕೋಲ ಸೇವೆ ಅರ್ಪಿಸುತ್ತಿದ್ದಾರೆ. ಇದರ ಖರ್ಚನ್ನು ಪೊಲೀಸ್ ಸಿಬಂದಿಯೇ ಸೇರಿಕೊಂಡು ಭರಿಸುತ್ತಾರೆ. ಹರಕೆ ಸೇವೆಯ ಜೊತೆಗೆ ಸೇರಿದ ಸಾರ್ವಜನಿಕರು ಮತ್ತು ಪೊಲೀಸ್ ಸಿಬಂದಿಗಳಿಗೆ ಊಟದ ವ್ಯವಸ್ಥೆಯನ್ನೂ ಮಾಡುತ್ತಾರೆ. ಊಟ, ಹರಕೆ ಸೇವೆಗಳಿಗೆ ಸುಮಾರು 50 ಸಾವಿರಕ್ಕಿಂತ ಹೆಚ್ಚು ಖರ್ಚು ಬರುತ್ತಿದ್ದು ಪ್ರತಿ ವರ್ಷ ನಿಷ್ಠೆಯಿಂದ ನಡೆಸಿಕೊಂಡು ಬಂದಿದ್ದಾರೆ.

ಈ ಬಗ್ಗೆ ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರಲ್ಲಿ ಕೇಳಿದರೆ, ಅಲ್ಲಿನ ಗುಳಿಗನಿಗೆ ಭಾರೀ ಕಾರಣಿಕ ಇದೆ. ಮೊದಲಿನಿಂದಲೂ ಪ್ರತಿವರ್ಷ ಈ ಸೇವೆ ನಡೆಸುತ್ತಾ ಬರಲಾಗಿದೆ. ನಮ್ಮ ಲೆಕ್ಕದಲ್ಲಿ ಕೋಲದ ಹರಕೆ ನೀಡುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಹಿಂದೆಲ್ಲಾ ಏನಾದ್ರೂ ತಪ್ಪಿಸಿಕೊಂಡು ಹೋದರೆ, ಶಸ್ತ್ರಾಸ್ತ್ರಗಳು ಕಾಣೆಯಾದರೆ ಗುಳಿಗನಿಗೆ ಹರಕೆ ಹೇಳಿದರೆ, ಕೋಲದ ಸಂದರ್ಭ ಕೇಳಿಕೊಂಡಿದ್ದ ವೇಳೆ ಅದು ಪತ್ತೆಯಾದ ಉದಾಹರಣೆಗಳಿವೆ. ಇದರಿಂದ ಹರಕೆ ಕೋಲ ನೀಡುವ ಸಂಪ್ರದಾಯ ಬೆಳೆದು ಬಂದದ್ದಿರಬೇಕು ಎಂದು ಹೇಳುತ್ತಾರೆ.
Karkala Police personals offer kola in the aspect of vow
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm