ಬ್ರೇಕಿಂಗ್ ನ್ಯೂಸ್
10-01-21 02:35 pm Mangalore Correspondent ಕರಾವಳಿ
ಮಂಗಳೂರು, ಜ.10: ಒಂದು ವರ್ಷದ ಹಿಂದೆ ಭಾರತೀಯ ಕೋಸ್ಟ್ ಗಾರ್ಡ್ ಪಡೆ ಭಾರತೀಯ ಜಲಗಡಿಯನ್ನು ಉಲ್ಲಂಘಿಸಿ ಲಕ್ಷದ್ವೀಪದ ಬಳಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಧಿಸಿದ್ದ ಇರಾನ್ ಮೂಲದ ಮೀನುಗಾರರನ್ನು ಕರ್ನಾಟಕ ಹೈಕೋರ್ಟ್ ಬಿಡುಗಡೆ ಮಾಡಿದೆ.
2019ರ ಅ.21ರಂದು ಲಕ್ಷದ್ವೀಪದ ಬಳಿ ಎರಡು ಬೋಟ್ ಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಇರಾನ್ ಮೂಲದ 15 ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ಬಂಧಿಸಿತ್ತು. ಬಳಿಕ ಅಕ್ಟೋಬರ್ 30ರಂದು ಅವರನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದ್ದು, 31ರಂದು ಕರಾವಳಿ ಕಾವಲು ಪಡೆಯ ಪಣಂಬೂರು ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಿಸಲಾಗಿತ್ತು.

ಅವಿಧಿ ಮತ್ತು ಇಶಾನ್ ಎಂಬ ಹೆಸರಿನ ಎರಡು ಬೋಟ್ ಗಳಲ್ಲಿ ಭಾರತೀಯ ಜಲಗಡಿಯ ಒಳಕ್ಕೆ ಬಂದು ಮೀನುಗಾರಿಕೆ ನಡೆಸುತ್ತಿದ್ದರು. ಈ ಭಾಗದಲ್ಲಿ ಮೀನುಗಾರಿಕೆ ನಡೆಸಲು ಅವರಿಗೆ ಯಾವುದೇ ಪರವಾನಗಿ ಹೊಂದಿರಲಿಲ್ಲ. ನೌಕಾಪಡೆಯ ಅಧಿಕಾರಿಗಳು ವಿಚಾರಣೆ ನಡೆಸುವುದಕ್ಕೆ ಅಡ್ಡಿಪಡಿಸಿದ್ದರು. ಇದರಿಂದ 15 ಮಂದಿಯನ್ನು ವಶಕ್ಕೆ ಪಡೆದು ಕರೆತರಲಾಗಿತ್ತು ಎಂದು ಕೋಸ್ಟ್ ಗಾರ್ಡ್ ಡೆಪ್ಯುಟಿ ಕಮಾಂಡೆಂಟ್ ಕುಲದೀಪ್ ಶರ್ಮಾ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಕರಾವಳಿ ಕಾವಲು ಪಡೆಯ ಇನ್ ಸ್ಪೆಕ್ಟರ್ ಗಂಗೀರೆಡ್ಡಿ ಮಂಗಳೂರಿನ 3ನೇ ಜೆಎಂಎಫ್ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
15 ಮಂದಿ ಆರೋಪಿ ಮೀನುಗಾರರನ್ನು ಮಂಗಳೂರು ಜೈಲಿನಲ್ಲಿ ಇರಿಸಲಾಗಿತ್ತು. ಆನಂತರ ಕೊರೊನಾ ಸಂದರ್ಭದಲ್ಲಿ ಒತ್ತಟ್ಟಿಗೆ ಇರಬಾರದೆಂಬ ನೆಲೆಯಲ್ಲಿ ಬೆಂಗಳೂರು ಜೈಲಿಗೆ ಅವರನ್ನು ಸ್ಥಳಾಂತರ ಮಾಡಲಾಗಿತ್ತು. ಈ ನಡುವೆ, ಇರಾನ್ ಸರಕಾರದ ದೆಹಲಿಯಲ್ಲಿರುವ ರಾಯಭಾರ ಕಚೇರಿ, ಮಂಗಳೂರಿನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವ ವಿಚಾರದಲ್ಲಿ ದೆಹಲಿ ವಕೀಲರನ್ನು ಸಂಪರ್ಕ ಮಾಡಿದೆ. ದೆಹಲಿ ವಕೀಲರು, ಕರ್ನಾಟಕ ಹೈಕೋರ್ಟ್ ವಕೀಲರಾಗಿರುವ ಮಂಗಳೂರು ಮೂಲದ ಖೇತನ್ ಬಂಗೇರ ಮತ್ತು ಅಭಿಷೇಕ್ ಮಾರ್ಲ ಅವರನ್ನು ಸಂಪರ್ಕಿಸಿದ್ದು, ಕೇಸ್ ಪಡೆಯಲು ಸೂಚಿಸಿದ್ದಾರೆ.

ಕೇಸ್ ಬಗ್ಗೆ ಅಧ್ಯಯನ ನಡೆಸಿದ ವಕೀಲರಿಬ್ಬರು, ಮಂಗಳೂರಿನ ಜೆಎಂಎಫ್ ಕೋರ್ಟಿನಲ್ಲಿ ಪ್ರಕರಣ ಇರುವಾಗಲೇ ಹೈಕೋರ್ಟಿನಲ್ಲಿ ಅಪೀಲು ಮಾಡಿದ್ದಾರೆ. ಕಳೆದ ಸೆಪ್ಟಂಬರ್ 5ರಂದು ಹೈಕೋರ್ಟಿಗೆ ಅರ್ಜಿ ಹಾಕಿದ್ದು, ಅಮಾಯಕ ವಿದೇಶಿ ಮೀನುಗಾರರ ಕ್ರಿಮಿನಲ್ ಕೇಸ್ ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ. ವಿಚಾರಣೆ ಕೈಗೆತ್ತಿಕೊಂಡ ಉಚ್ಚ ನ್ಯಾಯಾಲಯ, ವಕೀಲರ ವಾದವನ್ನು ಆಲಿಸಿ ಕ್ರಿಮಿನಲ್ ಪ್ರಕರಣ ರದ್ದುಪಡಿಸಿ ಡಿ.22ರಂದು ತೀರ್ಪು ನೀಡಿದೆ.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಇರಾನ್ ಮೀನುಗಾರರು ಅಂತಾರಾಷ್ಟ್ರೀಯ ಜಲಗಡಿಯನ್ನು ಪ್ರವೇಶ ಮಾಡಿದ್ದರು. ಇದು ಗಂಭೀರ ಅಪರಾಧವಲ್ಲ. ಅಂತಾರಾಷ್ಟ್ರೀಯ ಜಲಗಡಿಯಲ್ಲಿ ಇಂಥ ವಿಚಾರಗಳು ಸಾಮಾನ್ಯ. ಹೀಗಿರುವಾಗ ತಾವು ಮಾಡದ ತಪ್ಪಿಗಾಗಿ ಒಂದು ವರ್ಷದಿಂದ ಜೈಲಿನಲ್ಲಿ ಇರುವ ಮೀನುಗಾರರನ್ನು ಬಿಡುಗಡೆ ಮಾಡಬೇಕೆಂದು ವಾದ ಮಂಡಿಸಿದ್ದಾರೆ. ವಕೀಲರ ವಾದ ಆಲಿಸಿದ ಹೈಕೋರ್ಟ್, ಮೀನುಗಾರರನ್ನು ಬಿಡುಗಡೆ ಮಾಡಲು ಆದೇಶಿಸಿದೆ. 15 ಮಂದಿಗೆ ವೀಸಾ ಇನ್ನಿತರ ದಾಖಲೆ ಪತ್ರಗಳನ್ನು ಇರಾನ್ ದೇಶದಿಂದ ತರಿಸಲಾಗುತ್ತಿದ್ದು, ಅಲ್ಲೀ ವರೆಗೂ ಮೀನುಗಾರರನ್ನು ಫಾರಿನ್ ಡಿಟೆನ್ಶನ್ ಸೆಂಟರ್ ನಲ್ಲಿ ಇಡಲಾಗುವುದು ಎಂದು ವಕೀಲ ಖೇತನ್ ಬಂಗೇರ ಮಾಹಿತಿ ನೀಡಿದ್ದಾರೆ.
Mangalore coast guard acquits Iran fishermens out of Jail who were arrested in 2019.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm