ಬ್ರೇಕಿಂಗ್ ನ್ಯೂಸ್
10-01-21 03:22 pm Udupi Correspondent ಕರಾವಳಿ
ಕುಂದಾಪುರ, ಜ.10: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಿನ್ನೆ ನಡೆದ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಕುಂದಾಪುರ ಮೂಲದ ದಂಪತಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕಾರು ಚಲಾಯಿಸುತ್ತಿದ್ದ ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗೇಂದ್ರ ಶೇರಿಗಾರ್(32), ಅವರ ಸಂಬಂಧಿಕ ಅನಿಲ್ ಶೇರಿಗಾರ್ (35) ಮತ್ತು ಅವರ ಪತ್ನಿ ಸುಜಾತಾ(29) ಮೃತರು.
ತರೀಕೆರೆಯ ರಂಗೇನಹಳ್ಳಿಯ ನೇರ ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಬಿಳಿ ಬಣ್ಣದ ವೆರ್ನಾ ಮತ್ತು ಎರ್ಟಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿತ್ತು. ತೀವ್ರ ಗಾಯಗೊಂಡ ನಾಗೇಂದ್ರ, ಅನಿಲ್ ಮತ್ತು ಸುಜಾತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಮೂವರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನಿಲ್ ದಂಪತಿಯ ಒಂದೂವರೆ ವರ್ಷದ ಮಗು ಕನ್ನಿಕಾ ಯಾವುದೇ ಅಪಾಯಗಳಿಲ್ಲದೆ ಪಾರಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಿರಣ್ ತೀವ್ರ ಗಾಯಗೊಂಡಿದ್ದರೆ, ಅವರ ಜೊತೆಗಿದ್ದ ಅಶ್ವಥ್ ಮತ್ತು ನಾಗರಾಜ್ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದರು.

ಕುಂದಾಪುರ ಮೂಲದ ನಾಗೇಂದ್ರ ಬೆಂಗಳೂರಿನಲ್ಲಿ ಹೊಟೇಲ್ ಹೊಂದಿದ್ದು, ಕೋಡಿ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ನಿಮಿತ್ತ ಊರಿಗೆ ಬಂದಿದ್ದರು. ಅನಿಲ್ ಕೂಡ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದು, ಇದೇ ವೇಳೆಗೆ ಪತ್ನಿ ಮತ್ತು ಮಗುವಿನ ಜೊತೆ ಊರಿಗೆ ಬಂದಿದ್ದರು. ಅನಿಲ್ ಬೆಂಗಳೂರಿಗೆ ತೆರಳಲು ರೈಲಿನಲ್ಲಿ ಟಿಕೆಟ್ ಮಾಡಿದ್ದು ಹೋಗುವುದಕ್ಕೆ ರೆಡಿಯಾಗಿದ್ದರು. ಇದೇ ವೇಳೆ, ಜೊತೆಯಾಗಿದ್ದ ನಾಗೇಂದ್ರ ಹೇಗೂ ಕಾರಿನಲ್ಲಿ ಒಬ್ಬನೇ ಹೋಗುತ್ತಿದ್ದೇನೆ. ಜೊತೆಗೆ ಬನ್ನಿ ಎಂದು ಅನಿಲ್ ದಂಪತಿಯನ್ನು ಕಾರಿನಲ್ಲಿ ಕರೆದೊಯ್ದಿದ್ದರು ಎಂದು ಕೋಡಿಯ ಕುಟುಂಬಸ್ಥರು ಹೇಳುತ್ತಿದ್ದಾರೆ. ಹೀಗಾಗಿ ಕೋಡಿಯಲ್ಲಿ ಈಗ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಅಪಘಾತ ನಡೆದಿದ್ದು, ನಾಗೇಂದ್ರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದರೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆಗೆ ದಂಪತಿ ಸಾವು ಕಂಡಿದ್ದರು. ಪೋಸ್ಟ್ ಮಾರ್ಟಂ ಬಳಿಕ ಇಂದು ಕುಂದಾಪುರಕ್ಕೆ ಮೃತದೇಹ ರವಾನೆಯಾಗಿದೆ. ತರೀಕೆರೆಯ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿ ವೇಗದ ಚಾಲನೆ ಮೂವರ ಪ್ರಾಣವನ್ನು ಕಸಿದಿದೆ ಎನ್ನುವ ಮಾತನ್ನು ಜನರಾಡಿಕೊಳ್ಳುತ್ತಿದ್ದಾರೆ.
Three people from Kundapur, including a couple, died in a tragic accident that occurred at Rangenahalli of Tarikere in Chikkamagalur district on Saturday, January 9. The couple's young child survived.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm