ಬ್ರೇಕಿಂಗ್ ನ್ಯೂಸ್
10-01-21 03:22 pm Udupi Correspondent ಕರಾವಳಿ
ಕುಂದಾಪುರ, ಜ.10: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಿನ್ನೆ ನಡೆದ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಕುಂದಾಪುರ ಮೂಲದ ದಂಪತಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕಾರು ಚಲಾಯಿಸುತ್ತಿದ್ದ ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗೇಂದ್ರ ಶೇರಿಗಾರ್(32), ಅವರ ಸಂಬಂಧಿಕ ಅನಿಲ್ ಶೇರಿಗಾರ್ (35) ಮತ್ತು ಅವರ ಪತ್ನಿ ಸುಜಾತಾ(29) ಮೃತರು.
ತರೀಕೆರೆಯ ರಂಗೇನಹಳ್ಳಿಯ ನೇರ ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಬಿಳಿ ಬಣ್ಣದ ವೆರ್ನಾ ಮತ್ತು ಎರ್ಟಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿತ್ತು. ತೀವ್ರ ಗಾಯಗೊಂಡ ನಾಗೇಂದ್ರ, ಅನಿಲ್ ಮತ್ತು ಸುಜಾತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಮೂವರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನಿಲ್ ದಂಪತಿಯ ಒಂದೂವರೆ ವರ್ಷದ ಮಗು ಕನ್ನಿಕಾ ಯಾವುದೇ ಅಪಾಯಗಳಿಲ್ಲದೆ ಪಾರಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಿರಣ್ ತೀವ್ರ ಗಾಯಗೊಂಡಿದ್ದರೆ, ಅವರ ಜೊತೆಗಿದ್ದ ಅಶ್ವಥ್ ಮತ್ತು ನಾಗರಾಜ್ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದರು.

ಕುಂದಾಪುರ ಮೂಲದ ನಾಗೇಂದ್ರ ಬೆಂಗಳೂರಿನಲ್ಲಿ ಹೊಟೇಲ್ ಹೊಂದಿದ್ದು, ಕೋಡಿ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ನಿಮಿತ್ತ ಊರಿಗೆ ಬಂದಿದ್ದರು. ಅನಿಲ್ ಕೂಡ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದು, ಇದೇ ವೇಳೆಗೆ ಪತ್ನಿ ಮತ್ತು ಮಗುವಿನ ಜೊತೆ ಊರಿಗೆ ಬಂದಿದ್ದರು. ಅನಿಲ್ ಬೆಂಗಳೂರಿಗೆ ತೆರಳಲು ರೈಲಿನಲ್ಲಿ ಟಿಕೆಟ್ ಮಾಡಿದ್ದು ಹೋಗುವುದಕ್ಕೆ ರೆಡಿಯಾಗಿದ್ದರು. ಇದೇ ವೇಳೆ, ಜೊತೆಯಾಗಿದ್ದ ನಾಗೇಂದ್ರ ಹೇಗೂ ಕಾರಿನಲ್ಲಿ ಒಬ್ಬನೇ ಹೋಗುತ್ತಿದ್ದೇನೆ. ಜೊತೆಗೆ ಬನ್ನಿ ಎಂದು ಅನಿಲ್ ದಂಪತಿಯನ್ನು ಕಾರಿನಲ್ಲಿ ಕರೆದೊಯ್ದಿದ್ದರು ಎಂದು ಕೋಡಿಯ ಕುಟುಂಬಸ್ಥರು ಹೇಳುತ್ತಿದ್ದಾರೆ. ಹೀಗಾಗಿ ಕೋಡಿಯಲ್ಲಿ ಈಗ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಅಪಘಾತ ನಡೆದಿದ್ದು, ನಾಗೇಂದ್ರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದರೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆಗೆ ದಂಪತಿ ಸಾವು ಕಂಡಿದ್ದರು. ಪೋಸ್ಟ್ ಮಾರ್ಟಂ ಬಳಿಕ ಇಂದು ಕುಂದಾಪುರಕ್ಕೆ ಮೃತದೇಹ ರವಾನೆಯಾಗಿದೆ. ತರೀಕೆರೆಯ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿ ವೇಗದ ಚಾಲನೆ ಮೂವರ ಪ್ರಾಣವನ್ನು ಕಸಿದಿದೆ ಎನ್ನುವ ಮಾತನ್ನು ಜನರಾಡಿಕೊಳ್ಳುತ್ತಿದ್ದಾರೆ.
Three people from Kundapur, including a couple, died in a tragic accident that occurred at Rangenahalli of Tarikere in Chikkamagalur district on Saturday, January 9. The couple's young child survived.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm