ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm