ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm