ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm