ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm