ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm