ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm