ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm