ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm