ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm