ಬ್ರೇಕಿಂಗ್ ನ್ಯೂಸ್
13-01-21 04:06 pm Mangaluru Correspondent ಕರಾವಳಿ
ಬೆಳಗಾವಿ, ಜ.13: ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿರುವಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾರ್ಚ್ ನಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ. ಸ್ಥಾನ ಸಿಗದವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಮೂಲಕ ಹೊಸ ಕುತೂಹಲ ಹುಟ್ಟುಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಎಲ್ಲರೂ ಅಂದುಕೊಂಡ ರೀತಿ ಈಗ ಏಳು ಮಂದಿಗೆ ಸಚಿವ ಸ್ಥಾನ ಸಿಗುತ್ತಿದೆ. ಇಷ್ಟಕ್ಕೇ ಯಾರು ಕೂಡ ನೊಂದುಕೊಳ್ಳಬಾರದು. ಈಗ ಸಂಪುಟದಲ್ಲಿ ಸ್ಥಾನ ಸಿಗದವರಿಗೆ ಮಾರ್ಚ್, ಎಪ್ರಿಲ್ ನಲ್ಲಿ ನಡೆಯುವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸ್ಥಾನ ಸಿಗಲಿದೆ. ಈಗ ಯಡಿಯೂರಪ್ಪ ಅವರ ಕೈಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕಲಬುರ್ಗಿಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಲಿಷ್ಠರಿದ್ದು, ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ್ದಾರೆ. ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿದೆ. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಎಚ್.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್ ಅವರನ್ನು ಕೈಬಿಡುತ್ತಿಲ್ಲ. ಯೋಗೀಶ್ವರ್ ಅವರು ಈ ಸರಕಾರ ಬರಲು ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಮುನಿರತ್ನ, ಮಹೇಶ್ ಕುಮಟಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರ ಮಾತುಗಳನ್ನು ಆಶೀರ್ವಾದ ಎಂದುಕೊಳ್ಳೋಣ ಎಂದು ಹೇಳಿದರು.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm