ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm