ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm