ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm