ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm