ಬ್ರೇಕಿಂಗ್ ನ್ಯೂಸ್
14-01-21 07:43 pm Mangaluru Correspondant ಕರಾವಳಿ
ಮಂಗಳೂರು, ಜ.14: ಆಡಳಿತದಲ್ಲಿರುವ ಸರ್ಕಾರದ ಸದಸ್ಯರೇ ಸಿಎಂ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ. ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ನೀಡಲಾಗಿದೆಯಾ..? ಕಾರ್ಕಳ ಶಾಸಕರು ಕೂಡ ನನಗೆ ಪಕ್ಷ ನಿಷ್ಠೆ ಗೊತ್ತು , ಬ್ಲಾಕ್ ಮೇಲ್ ಗೊತ್ತಿಲ್ಲ ಎನ್ನುತ್ತಾರೆ. ಇದರ ಅರ್ಥ ಏನು ? ಬ್ಲಾಕ್ ಮೇಲ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಸಿಡಿ ಹೇಳಿಕೆಯ ಬಗ್ಗೆ ಜನರು ಗಮನಿಸುತ್ತಾರೆ. ಎಲ್ಲ ವಿಚಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪ್ರಧಾನಮಂತ್ರಿಯನ್ನು ದೂಷಿಸಿದರೆ ದೇಶದ್ರೋಹಿ ಎನ್ನಲಾಗುತ್ತದೆ. ರಾಜ್ಯದ ಸಿಎಂ ಅವರನ್ನು ದೂಷಿಸಿದರೆ ದೇಶದ್ರೋಹಿ ಆಗಲ್ವಾ..? ಈಗ ಕರ್ನಾಟಕದ ಸಿಎಂಗೆ ಅಪಮಾನ ಮಾಡಲಾಗುತ್ತಿದೆ. ಆಡಳಿತದಲ್ಲಿರುವ ಸರ್ಕಾರದ ಶಾಸಕರೇ ಸಿಎಂರನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದರು.
ಸಚಿವ ಸ್ಥಾನ ಕೊಡದ್ದಕ್ಕೆ ಬಿಜೆಪಿ ಶಾಸಕರೇ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನ ಯಾಕೆ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಯವರೇ ಮುನಿರತ್ನಗೆ ಸ್ಪಷ್ಟನೆ ನೀಡಬೇಕು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಸುಳ್ಯದ ಶಾಸಕ ಎಸ್.ಅಂಗಾರ ಸಚಿವರಾದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಎಸ್.ಅಂಗಾರ ಸಚಿವರಾಗಿರುವುದು ನಮಗೆ ಖುಷಿಯ ವಿಚಾರ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ಕೊಡುತ್ತೇವೆ. ಕರಾವಳಿಯ ಇಬ್ಬರು ಸಚಿವರು ಕೂಡ ಹಿರಿಯರು. ದ.ಕ. ಜಿಲ್ಲೆಗೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಬೇಕು ಎಂದು ಹೇಳಿದರು.
ತಾಲೂಕು ಪಂಚಾಯತ್ ವ್ಯವಸ್ಥೆ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ತಾಲೂಕು ಮಟ್ಟದ ಅಭಿವೃದ್ಧಿಯನ್ನು ಜಿಲ್ಲಾಡಳಿತ ನೇರವಾಗಿ ನೋಡಲು ಆಗುತ್ತಾ..? ಆಡಳಿತ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗುತ್ತಾ...? ತಾಪಂ ರದ್ದು, ಬಂದ್ ಮಾಡುವುದು ಸರ್ಕಾರದ ಕೆಲಸವಲ್ಲ. ಸ್ಥಳೀಯ ಪ್ರತಿನಿಧಿಗಳಿಗೆ ಅಧಿಕಾರ ಕೊಡುವುದು ಸರ್ಕಾರದ ಕೆಲಸ. ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ನಿಭಾಯಿಸಲು ತಂಡದ ಅಗತ್ಯವಿದೆ ಎಂದು ಹೇಳಿದರು.
MLA U T Khader said that the chief minister (CM) deserves the same respect as the prime minister of the country.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm